ಮಹಿಳೆಯ ಅಪಹರಣ ಪ್ರಕರಣ | ಎಚ್‌.ಡಿ.ರೇವಣ್ಣಗೆ ಮತ್ತೆ ನೋಟಿಸ್ ಜಾರಿ

Update: 2024-06-02 15:35 GMT

ಬೆಂಗಳೂರು : ಮಹಿಳೆ ಅಪಹರಣ ಪ್ರಕರಣ ಸಂಬಂಧ ಜಾಮೀನಿನ ಮೇಲೆ ಜೈಲಿನಿಂದ ಬಿಡೆಗಡೆ ಆಗಿರುವ ಜೆಡಿಎಸ್ ಎಚ್.ಡಿ.ರೇವಣ್ಣ ಅವರಿಗೆ ನೋಟಿಸ್ ಜಾರಿಗೊಳಿಸಿದ್ದು, ಹೈಕೋರ್ಟಿಗೆ ಹಾಜರಾಗುವಂತೆ ಸೂಚಿಸಲಾಗಿದೆ.

ಹೊಳೆನರಸೀಪುರ ಪೊಲೀಸ್ ಠಾಣಾ ಸಿಬ್ಬಂದಿ ಹರದನಹಳ್ಳಿ ಮನೆಯಲ್ಲಿ ರೇವಣ್ಣಗೆ ಹೈಕೋರ್ಟ್‍ನ ನೊಟೀಸ್ ಮುಟ್ಟಿಸಿದ್ದು, ಈ ನೋಟಿಸ್ ತಲುಪಿದ ಐದು ದಿನದೊಳಗೆ ಹಾಜರಾಜಗಲು ಕೋರ್ಟ್ ನೋಟಿಸ್‍ನಲ್ಲಿ ಉಲ್ಲೇಖಿಸಲಾಗಿದೆ ಎಂದು ವರದಿಯಾಗಿದೆ.

ಮೈಸೂರಿನ ಕೆಆರ್ ಪೇಟೆಯಲ್ಲಿ ದಾಖಲಾಗಿರುವ ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣದಲ್ಲಿ ಎಚ್‍ಡಿ ರೇವಣ್ಣ ಅವರನ್ನು ಎಸ್‌ಐಟಿ ಬಂಧಿಸಿತ್ತು. ಆದರೆ, ರೇವಣ್ಣ ಅವರು ಜಾಮೀನು ಪಡೆದಿದ್ದರು. ಈ ಸಂಬಂಧ ಎಸ್‌ಐಟಿ ತನಿಖಾಧಿಕಾರಿಗಳು ಜಾಮೀನು ಪ್ರಶ್ನಿಸಿ ಹೈಕೋರ್ಟ್ ಅರ್ಜಿ ಸಲ್ಲಿಸಿದ್ದಾರೆ. ಅದರಂತೆ ನೋಟಿಸ್ ಜಾರಿಯಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News