ಕೋಲಾರ | ʼಜನತಾ ದರ್ಶನʼ ಕಾರ್ಯಕ್ರಮದ ವೇದಿಕೆಯಲ್ಲಿಯೇ ಸಂಸದ -ಶಾಸಕರ ನಡುವೆ ಜಟಾಪಟಿ

Update: 2023-09-25 09:47 GMT

ಕೋಲಾರ: ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮದ ವೇದಿಕೆಯಲ್ಲಿಯೇ ಸಂಸದರು ಹಾಗೂ ಶಾಸಕರ ನಡುವೆ ಜಟಾಪಟಿ ನಡೆದ ಘಟನೆ ವರದಿಯಾಗಿದೆ. 

ಇಂದು (ಸೋಮವಾರ) ರಾಜ್ಯಾದ್ಯಂತ ಏಕಕಾಲದಲ್ಲಿ ಜನತಾದರ್ಶನಕ್ಕೆ ಚಾಲನೆ ಸಿಕಿದೆ.  ಅದರಂತೆ ಕೋಲಾರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ನಡೆಯುತ್ತಿದ್ದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಸಂಸದ ಎಸ್.ಮುನಿಸ್ವಾಮಿ ಹಾಗೂ ಶಾಸಕ ಎಸ್.ನಾರಾಯಣಸ್ವಾಮಿ ನಡುವೆ ಜಟಾಪಟಿ ನಡೆದಿದೆ. ಇಬ್ಬರೂ ವೇದಿಕೆ ಮೇಲೆಯೇ ಏಕವಚನದಲ್ಲಿ ಬೈದಾಡಿಕೊಂಡಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಸಮ್ಮುಖದಲ್ಲಿಯೇ ನಾಯಕರು ಪರಸ್ಪರ ಬೈದಾಡಿಕೊಂಡಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಜನಪ್ರತಿನಿಧಿಗಳನ್ನು ಸಮಾಧಾನ ಪಡಿಸಲು ಪೊಲೀಸರು ಮತ್ತು ಸಚಿವರು ಹರಸಾಹಸ ಪಡುವುದು ವೀಡಿಯೊದಲ್ಲಿ ದಾಖಲಾಗಿದೆ. 

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News