ಕೆಎಸ್ಸಾರ್ಟಿಸಿಗೆ ಪ್ರತಿಷ್ಠಿತ ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ

Update: 2024-09-21 18:34 GMT

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್ಸಾರ್ಟಿಸಿ)ಗೆ ಪ್ರತಿಷ್ಠಿತ ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ ಸಂದಿದ್ದು, ಶನಿವಾರ ದಿಲ್ಲಿಯ ಸ್ಕಾಚ್ ಸಂಸ್ಥೆಯು ಇಂಡಿಯಾ ಹ್ಯಾಬಿಟೇಟ್ ಸೆಂಟರ್‍ನ ಸಿಲ್ವರ್ ಓಕ್ ಹಾಲ್‍ನಲ್ಲಿ ಆಯೋಜಿಸಿದ ಸಮಾರಂಭದಲ್ಲಿ ಗ್ರೂಪ್‍ನ ಅಧ್ಯಕ್ಷ ಸಮೀರ್ ಕೊಚ್ಚರ್, ಉಪಾಧ್ಯಕ್ಷ ಡಾ.ಗುರುಶರಣ್ ಧನ್ಜಾಲ್ ಪ್ರಶಸ್ತಿ ಪ್ರದಾನ ಮಾಡಿದರು.

ಕೆಎಸ್ಸಾರ್ಟಿಸಿಯ ಹಿರಿಯ ಅಧಿಕಾರಿಗಳಾದ ವೆಂಕಟೇಶ ಟಿ., ಅಶ್ರಫ್ ಕೆ.ಎಂ. ಅವರುಗಳು ಪ್ರಶಸ್ತಿ ಸ್ವೀಕರಿಸಿದರು.

ನಿಗಮದ ನೌಕರರಿಗೆ ಹೃದಯ ಸಂಬಂಧಿ ಆರೋಗ್ಯ ತಪಾಸಣೆ-ಮುಂಜಾಗ್ರತೆ ಉಪಕ್ರಮಗಳಿಗಾಗಿ ‘ಸಾರಿಗೆ ಸಂಜೀವಿನಿ’ ಯೋಜನೆ ಜಾರಿಗೆ ತರಲಾಗಿದ್ದು, ಸದರಿ ಉಪಕ್ರಮಕ್ಕಾಗಿ ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ. 

Full View

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News