ಕೆಎಸ್ಸಾರ್ಟಿಸಿಗೆ ‘ಏಷ್ಯಾದ ಅತ್ಯುತ್ತಮ ಉದ್ಯೋಗದಾತ ಬ್ರಾಂಡ್’ ಪ್ರಶಸ್ತಿ ಪ್ರದಾನ

Update: 2023-08-17 14:04 GMT

ಬೆಂಗಳೂರು, ಆ. 17: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್ಸಾರ್ಟಿಸಿ) world sustainability congress ನೀಡುವ ಪ್ರತಿಷ್ಠಿತ ‘ಏಷ್ಯಾದ ಅತ್ಯುತ್ತಮ ಉದ್ಯೋಗದಾತ ಬ್ರ್ಯಾಂಡ್’ 2023ನೆ ಸಾಲಿನ ಪ್ರಶಸ್ತಿಗೆ ಆಯ್ಕೆಯಾಗಿದ್ದು, ಗುರುವಾರ ಸಿಂಗಾಪುರದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಕೆಎಸ್ಸಾರ್ಟಿಸಿ ‘ಅತ್ಯುತ್ತಮ ಮಾನವ ಸಂಪನ್ಮೂಲ ಉಪಕ್ರಮಗಳ ಅನುಷ್ಠಾನ ವರ್ಗದಲ್ಲಿ ಪ್ರಶಸ್ತಿಗೆ ಆಯ್ಕೆಯಾಗಿದೆ. ಸಿಂಗಾಪುರದಲ್ಲಿ ಆಯೋಜಿಸಿದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ‘ಏಷ್ಯಾದ ಅತ್ಯುತ್ತಮ ಉದ್ಯೋಗದಾತ ಬ್ರ್ಯಾಂಡ್ ಪ್ರಶಸ್ತಿ’ಯನ್ನು ಕಂಟ್ರಿ ಮ್ಯಾನೇಜರ್, ಅಸೋಸಿಯೇಷನ್ ಆಫ್ ಇಂಟರ್ ನ್ಯಾಷನಲ್ ಸರ್ಟಿಪೈಡ್ ಪ್ರೊಫೆಶನಲ್ ಅಕೌಂಟೆಂಟ್ಸ್ ಹಾಗೂ ಅಟಾರ್ನಿ ವಿಲ್ಬರ್ ಎನ್.ಜಿ. ಹಾಗೂ ಚೀಫ್ ಎನ್ವೈಮೆರ್ಂಟ್, ಸೋಷಿಯಲ್ ಮತ್ತು ಗೌರ್ನನ್ಸ್ ಅಫೀಸರ್ ಕರೀನ ಲೆನೋರ್ ಎಸ್. ಬಯೋನ್ ಅವರು, ಕೆಎಸ್ಸಾರ್ಟಿಸಿಯ ಮುಖ್ಯ ಲೆಕ್ಕಾಧಿಕಾರಿ ಹಾಗೂ ಆರ್ಥಿಕ ಸಲಹೆಗಾರ್ತಿ ಮಂಜುಳ ನಾಯ್ಕ್ ಹಾಗೂ ಕೆಎಸ್ಸಾರ್ಟಿಸಿ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಡಾ.ಲತಾ ಟಿ.ಎಸ್. ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News