ಬೀದಿಯಲ್ಲಿ ʼಹಿಟ್ ಅಂಡ್ ರನ್ʼ ಮಾಡುವುದಲ್ಲ, ಮಾಧ್ಯಮಗಳಲ್ಲಿ ಚರ್ಚೆಗೆ ಬರಲಿ : ಎಚ್‌ಡಿಕೆಗೆ ಡಿಕೆಶಿ ಸವಾಲು

Update: 2024-07-15 12:34 GMT

ಕುಮಾರಸ್ವಾಮಿ/ಡಿ.ಕೆ.ಶಿವಕುಮಾರ್

ಬೆಂಗಳೂರು : “ಕುಮಾರಸ್ವಾಮಿ ಜೀವನ ಬರೀ ʼಹಿಟ್ ಅಂಡ್ ರನ್ʼ ಮಾಡುವುದೇ ಆಗಿದೆ. ಅವರು ಬೀದಿಯಲ್ಲಿ ʼಹಿಟ್ ಅಂಡ್ ರನ್ʼ ಮಾಡುವ ಬದಲು ಮಾಧ್ಯಮಗಳಲ್ಲಿ ಚರ್ಚೆಗೆ ಬರಲಿ, ಇಲ್ಲವೇ ಅವರ ಶಾಸಕರಿಂದ ಸದನದಲ್ಲಿ ಚರ್ಚೆ ಮಾಡಿಸಲಿ " ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕೇಂದ್ರ ಸಚಿವ ಕುಮಾರಸ್ವಾಮಿಗೆ ಸವಾಲೆಸೆದರು.

ಕಸ ವಿಲೇವಾರಿ ಟೆಂಡರ್‌ನಲ್ಲಿ 15 ಸಾವಿರ ಕೋಟಿ ಲಂಚ ಪಡೆಯಲಾಗಿದೆ ಎಂಬ ಕುಮಾರಸ್ವಾಮಿ ಅವರ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, "ಕುಮಾರಸ್ವಾಮಿ ಹತಾಶೆಯಲ್ಲಿದ್ದಾರೆ. ಅವರು ಬಹಿರಂಗ ಚರ್ಚೆಗೆ ಬರಲಿ. ಡಿ.ಕೆ.ಶಿವಕುಮಾರ್ ಅವರಂತೆ ʼಹಿಟ್ ಅಂಡ್ ರನ್ʼ ಮಾಡುವುದಿಲ್ಲ.ಕುಮಾರಸ್ವಾಮಿ ಅವರ ಪಕ್ಷದ ಸದಸ್ಯರಿಗೆ ದಾಖಲೆ ಕೊಟ್ಟು ಸದನದಲ್ಲಿ ಚರ್ಚೆ ಮಾಡಿಸಲಿ. ʼಕಿಂಗ್ ಆಫ್ ಕರಪ್ಶನ್ʼ ಎಂದು ಜನ ನನ್ನನ್ನಾಗಲಿ, ನನ್ನ ಕುಟುಂಬದವರನ್ನು ಕರೆದಿಲ್ಲ. ಆ ರೀತಿ ಯಾರನ್ನು ಕರೆದಿದ್ದಾರೆ ಎಂದು ಚರ್ಚೆಗೆ ಬರಲಿ ತಿಳಿಸುತ್ತೇನೆ. ಇವರು ಚರ್ಚೆಗೆ ಬರಲಿ. ನಾನು ಅವರ ಚರಿತ್ರೆ ತೆಗೆಯುತ್ತೇನೆ. ಎಲ್ಲವೂ ದಾಖಲೆಯಲ್ಲಿ ಉಳಿಯಲಿ" ಎಂದು ವಾಗ್ದಾಳಿ ನಡೆಸಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News