ಬಿಜೆಪಿಯವರು ಬರೀ ಬಾಯಲ್ಲಿ ಹಿಂದುತ್ವ ಎಂದು ಹೇಳುವುದು ಬಿಟ್ಟು ಭಗವಂತನ ಸೇವೆ ಮಾಡಲಿ: ಶಾಸಕ ಜನಾರ್ದನ ರೆಡ್ಡಿ

Update: 2023-07-27 12:42 GMT

ಕೊಪ್ಪಳ: 'ಬಿಜೆಪಿಯವರು ಬರೀ ಬಾಯಲ್ಲಿ ಹಿಂದುತ್ವ ಎಂದು ಹೇಳುವುದು ಬಿಟ್ಟು ಭಗವಂತನ ಸೇವೆ ಮಾಡಬೇಕು' ಎಂದು ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಹೇಳಿದ್ದಾರೆ. 

ಗುರುವಾರ ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ''ಬಿಜೆಪಿಯವರು ಪ್ರತಿ ವಿಚಾರದಲ್ಲೂ ರಾಜಕೀಯ ಮಾಡುತ್ತಿದ್ದಾರೆ. ಕೇವಲ ಬಾಯಿ ಮಾತಿಗೆ ಹಿಂದುತ್ವ.. ಹಿಂದುತ್ವ ಅಂದರೆ ಸಾಲದು. ಕಳೆದ ನಾಲ್ಕು ವರ್ಷಗಳಲ್ಲಿ ರಾಜ್ಯದಲ್ಲಿ ಅವರು ಏನು ಮಾಡಿದ್ದಾರೆ'' ಎಂದು ಕಿಡಿಕಾರಿದರು. 

''ರಾಜ್ಯ ಮತ್ತು ಕೇಂದ್ರದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದಾಗ ರಾಮ ಜಪ, ಹನುಮ ಜಪ ನಡೆದಿತ್ತು. ಆಗ ಅಂಜನಾದ್ರಿಯಲ್ಲಿ ಕೆಲಸ ಮಾಡಬಹುದಿತ್ತು. ಆದರೆ, ರಾಜ್ಯದಲ್ಲಿದ್ದ ಬಿಜೆಪಿ ಸರ್ಕಾರ ಗಮನ ನೀಡಲಿಲ್ಲ'' ಎಂದು ಆಕ್ರೋಶ ವ್ಯಕ್ತಪಡಿಸಿದರು. 

''ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಂಜನಾದ್ರಿ ಅಭಿವೃದ್ದಿ ಮಾಡುವಂತೆ ಮನವಿ ಮಾಡಿದ್ದೇನೆ. ಅಂಜನಾದ್ರಿಗೆ ಲಕ್ಷಾಂತರ ಭಕ್ತರು ಬರುತ್ತಾರೆ, ಅವರಿಗೆ ಉಳಿದುಕೊಳ್ಳಲು ಸೌಲಭ್ಯವಿಲ್ಲ. ಹೀಗಾಗಿ ಹೆಚ್ಚೆಚ್ಚು ಸೌಲಭ್ಯಗಳನ್ನು ಕಲ್ಪಿಸಬೇಕಿದೆ'' ಎಂದು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News