ಲೋಕಸಭೆ ಚುನಾವಣೆಗೆ ಸ್ಪರ್ಧೆ ವಿಚಾರ: ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಪ್ರತಿಕ್ರಿಯೆ ಏನು?

Update: 2023-07-05 16:41 GMT

ಫೋಟೊ- Twitter

ಮೈಸೂರು,ಜು.5: 'ಪಕ್ಷ ಸೂಚಿಸಿದರೆ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ಧ' ಎಂದು ಮಾಜಿ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ತಿಳಿಸಿದ್ದಾರೆ.

ಲೋಕಸಭೆ ಚುನಾವಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯ ಸ್ಪರ್ಧೆ ಮಾಡಬೇಕು ಎಂದು ಬೆಂಬಲಿಗರ ಒತ್ತಾಯ ಹಿನ್ನೆಲೆ ಈ ಕುರಿತು ಡಾ. ಯತೀಂದ್ರ ಸಿದ್ದರಾಮಯ್ಯ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು,'ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ಬಗ್ಗೆ ನಾನಾಗಲಿ ತಂದೆಯವರಾಗಲಿ ಚರ್ಚೆ ನಡೆಸಿಲ್ಲ. ಚುನಾವಣೆಗೆ ಇನ್ನು 8 ತಿಂಗಳ ಕಾಲಾವಕಾಶ ಇದೆ. ಚುನಾವಣೆ ಸಮೀಪ ಯಾರು ಸೂಕ್ತ ಅಭ್ಯರ್ಥಿ ಎಂದು ಗೊತ್ತಾಗಲಿದೆ. ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಬೇಕು ಅಷ್ಟೇ. ಆದ್ದರಿಂದ ಸೂಕ್ತ ವ್ಯಕ್ತಿಯನ್ನು ಆಯ್ಕೆ ಮಾಡುತ್ತೇವೆ. ಒಂದು ವೇಳೆ ನಾನು ಸ್ಪರ್ಧೆ ಮಾಡಬೇಕು ಎಂದು ಪಕ್ಷ ಸೂಚನೆ ನೀಡಿದರೆ ಪಾಲನೆ ಮಾಡಬೇಕಾಗುತ್ತದೆ' ಎಂದರು.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News