ಲಾರಿ ಪಲ್ಟಿ: ಚಾಲಕ ಸ್ಥಳದಲ್ಲೇ ಮೃತ್ಯು

Update: 2023-09-20 13:08 GMT

ಸಾಗರ : ಹೆಂಚು ತುಂಬಿಕೊಂಡು ಹೋಗುತ್ತಿದ್ದ ಲಾರಿ ಪಲ್ಟಿ ಹೊಡೆದ ಪರಿಣಾ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳವಾರ ರಾತ್ರಿ ವರದಿಯಾಗಿದೆ.

ಕುಂದಾಪುರದಿಂದ ಹೆಂಚು ತುಂಬಿಕೊಂಡು ಸಾಗರ ಮಾರ್ಗವಾಗಿ ಸೊರಬ ಕಡೆ ಹೊರಟಿದ್ದ ಲಾರಿ ಮರಸ ಗ್ರಾಮದ ಸಮೀಪ ಉರುಳಿ ಬಿದ್ದಿದೆ ಎನ್ನಲಾಗಿದೆ. ಘಟನೆಯಲ್ಲಿ ಲಾರಿ ಚಾಲಕ ಸೊರಬ ತಾಲೂಕಿನ ಮನ್ಸೂಬ್ ಖಾನ್ (41) ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. , 

ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿರಬಹುದು ಎಂದು ಸ್ಥಳೀಯರು ತಿಳಿಸಿದ್ದು, ಸ್ಥಳಕ್ಕೆ ಗ್ರಾಮಾಂತರ ಠಾಣೆ ಇನ್ಸ್‌ಪೆಕ್ಟರ್ ಮಹಾಬಲೇಶ್ವರ್ ನಾಯ್ಕ್ ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

 

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News