ಮಡಿಕೇರಿ | ಕಾಡಾನೆ ದಾಳಿಗೆ ಮಹಿಳೆ ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ

Update: 2023-08-21 05:06 GMT

ಮಡಿಕೇರಿ ಆ.21: ಕಾಡಾನೆ ದಾಳಿ ಮಾಡಿದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸಿದ್ದಾಪುರ ಸಮೀಪ ಮಾಲ್ತಾರೆ ಮಟ್ಟಂ ಎಂಬಲ್ಲಿ ಸೋಮವಾರ ವರದಿಯಾಗಿದೆ.

ಮೃತ ಮಹಿಳೆಯನ್ನು ಐಶಾ (62) ಎಂದು ಗುರುತಿಸಲಾಗಿದೆ.

ಇಂದು ಬೆಳಗ್ಗೆ ಮನೆಯ ಸಮೀಪ ವಾಯು ವಿಹಾರ ಮಾಡುತ್ತಿದ್ದ ಸಂದರ್ಭ ಈ ಘಟನೆ ನಡೆದಿದೆ. ಘಟನೆಯನ್ನು ಖಂಡಿಸಿ, ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರು ಪ್ರತಿಭಟನೆ ನಡೆಸುತ್ತಿದ್ದು, ಸ್ಥಳಕ್ಕೆ ಅರಣ್ಯ ಸಚಿವರು ಆಗಮಿಸಬೇಕೆಂದು ಒತ್ತಾಯಿಸುತ್ತಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News