ಮಾಜಿ ಸಚಿವ ಯೋಗೇಶ್ವರ್ ಬಾವ ಮಹದೇವಯ್ಯ ನಿಗೂಢ ನಾಪತ್ತೆ ಪ್ರಕರಣ: ಪತ್ತೆಯಾದ ಕಾರಿನಲ್ಲಿ ರಕ್ತದ ಕಲೆ

Update: 2023-12-04 06:52 GMT

ಚಾಮರಾಜನಗರ, ಡಿ.4: ಮೂರು ದಿನಗಳ ಹಿಂದೆ ರಾಮನಗರ ಜಿಲ್ಲೆಯ ಚನ್ನಪಟ್ಟಣದಿಂದ ನಿಗೂಡವಾಗಿ ಕಾಣೆಯಾಗಿರುವ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಅವರ ಬಾವ ಮಹದೇವಯ್ಯರ ಕಾರು ಹನೂರು ತಾಲೂಕಿನ ರಾಮಾಪುರದಲ್ಲಿ ಪತ್ತೆಯಾಗಿದ್ದು, ಕಾರಿನಲ್ಲಿ ರಕ್ತದ ಕಲೆಗಳು ಪತ್ತೆಯಾಗಿರುವುದಾಗಿ ತಿಳಿದುಬಂದಿದೆ.

 ಸ್ಥಳಕ್ಕೆ ಸಿ.ಪಿ.ಯೋಗೇಶ್ವರ್ ಭೇಟಿ ನೀಡಿದ್ದಾರೆ. ಚನ್ನಪಟ್ಟಣ ಪೊಲೀಸರು ಕೂಡ ಸ್ಥಳಕ್ಕೆ ಆಗಮಿಸಿದ್ದು ಬೆರಳಚ್ಚು ತಜ್ಞರು ಕೂಡ ಕಾರನ್ನು ಪರಿಶೀಲನೆ ನಡೆಸಿದ್ದಾರೆ.

ಮಹದೇವಯ್ಯ ಬಳಸುತ್ತಿದ್ದ ಕಾರು ರವಿವಾರ ರಾತ್ರಿ ರಾಮಾಪುರದ ಪ್ರಾಥಮಿಕ ಆರೋಗ್ಯ ಕೇಂದ್ರದ ಬಳಿ ಪತ್ತೆಯಾಗಿದ್ದು, ಮಹದೇವಯ್ಯರ ಸುಳಿವು ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಚನ್ನಪಟ್ಟಣ ತಾಲೂಕಿನ ಚಕ್ಕರೆ ಗ್ರಾಮದ ಮಹದೇವಯ್ಯ ತಮ್ಮ ತೋಟದ ಮನೆಯಿಂದ ಮೂರು ದಿನಗಳ ಹಿಂದೆ ನಿಗೂಢವಾಗಿ ಕಾಣೆಯಾಗಿದ್ದಾರೆ. ಅವರನ್ನು ಯಾರೋ ಅಪಹರಿಸಿರುವ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ಚನ್ನಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News