ಮಂಡ್ಯ: ಡೆತ್‌ ನೋಟ್‌ ಬರೆದಿಟ್ಟು ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ

Update: 2023-08-07 14:05 GMT

ಶೃತಿ- ಮೃತಪಟ್ಟಿರುವ ಬ್ಯಾಂಕ್‌ ಉದ್ಯೋಗಿ

ಮಂಡ್ಯ, ಆ.7: ಜೀವನದಲ್ಲಿ ಜಿಗುಪ್ಸೆಗೊಂಡು ನಗರದ ಕಾವೇರಿ ಗ್ರಾಮೀಣ ಬ್ಯಾಂಕ್‍ನ ಪ್ರಾದೇಶಿಕ ಕಚೇರಿ ವ್ಯವಸ್ಥಾಪಿ ಶೃತಿ(30 ಎಂಬುವರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ನಗರದ ವಿನಾಯಕ ಬಡಾವಣೆಯ ಬಾಡಿಗೆ ಮನೆಯಲ್ಲಿ ಅವರು ನೇಣು ಬಿಗಿದುಕೊಂಡಿದ್ದು, ಐಎಎಸ್ ಕನಸು ಮತ್ತು ಜೀವನದ ವೈಫಲ್ಯ ಸಾವಿಗೆ ಕಾರಣ ಎಂದು ಅವರು ಮರಣ ಪೂರ್ವ ಪತ್ರದಲ್ಲಿ ಬರೆದಿದ್ದಾರೆ ಎನ್ನಲಾಗಿದೆ.

ಕೊಳ್ಳೇಗಾಲದ ಮಲ್ಲಪ್ಪ ಅವರ ಪುತ್ರಿಯಾದ ಶೃತಿ, ಕಾವೇರಿ ಗ್ರಾಮೀಣ ಬ್ಯಾಂಕ್‍ನ ಉದ್ಯೋಗಿಯಾಗಿ ನೇಮಕಗೊಂಡು ಚಿಕ್ಕಮಗಳೂರಿನ ಶಾಖೆಯಲ್ಲಿ ಕಳೆದ ಏಳು ವರ್ಷ ಕಾರ್ಯನಿರ್ವಹಿಸಿ ಮಂಡ್ಯದ ಪ್ರಾದೇಶಿಕ ಕಚೇರಿಗೆ ಎರಡು ತಿಂಗಳ ಹಿಂದೆ ಬಂದಿದ್ದರು.

ಅವಿವಾಹಿತರಾಗಿದ್ದ ಶೃತಿ, ವಿನಾಯಕ ಬಡಾವಣೆಯ ರಾಜಣ್ಣ ಎಂಬುವರ ಮನೆಯನ್ನು ಬಾಡಿಗೆಗೆ ಪಡೆದು ವಾಸವಿದ್ದರು. ರವಿವಾರ ತಡರಾತ್ರಿ ತಂದೆ ಮಲ್ಲಪ್ಪರಿಗೆ ಕರೆ ಮಾಡಿ ತಾನು ದೇವರ ಬಳಿ ಹೋಗುತ್ತಿದ್ದೇನೆ, ನನ್ನನ್ನು ಕ್ಷಮಿಸಿ ಎಂದು ಹೇಳಿ ಕರೆ ಕಡಿತ ಮಾಡಿದ್ದಾರೆ ಎನ್ನಲಾಗಿದೆ.

ತಕ್ಷಣ ಮಲ್ಲಪ್ಪ ಕರೆ ಮಾಡಿದಾಗ ಮೊಬೈಲ್ ಸ್ವಿಚ್ ಆಫ್ ಆಗಿದ್ದು, ಮಂಡ್ಯದಲ್ಲಿರುವ ಸಂಬಂಧಿಕರಿಗೆ ವಿಚಾರ ತಿಳಿಸಿದ್ದಾರೆ. ಸಂಬಂಧಿಕು ಮನೆಯ ಬಳಿ ಹೋಗಿ ನೋಡಿದಾಗ ಅಷ್ಟರಲ್ಲಿ ನೇಣು ಬಿಗಿದುಕೊಂಡಿದ್ದರು ಎಂದು ವರದಿಯಾಗಿದೆ.

ಗ್ರಾಮಾಂತರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News