ಬಿಜೆಪಿಯ ನೂತನ ರಾಜ್ಯಾಧ್ಯಕ್ಷರ ಅಧಿಕಾರ ಸ್ವೀಕಾರ ಕಾರ್ಯಕ್ರಮ; ಸಿ.ಟಿ ರವಿ ಸಹಿತ ಹಲವು ನಾಯಕರು ಗೈರು!

Update: 2023-11-15 10:26 GMT

ಬೆಂಗಳೂರು: ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ನಡೆದ ಬಿಜೆಪಿಯ ನೂತನ ರಾಜ್ಯಾಧ್ಯಕ್ಷರ ಅಧಿಕಾರ ಸ್ವೀಕಾರ ಕಾರ್ಯಕ್ರಮಕ್ಕೆ ಸಿ.ಟಿ ರವಿ, ಬಸನಗೌಡ ಪಾಟೀಲ್ ಯತ್ನಾಳ್‌, ಸೋಮಣ್ಣ ಸಹಿತ ಹಲವು ಪ್ರಮುಖ ನಾಯಕರು ಗೈರಾಗಿರುವ ಬಗ್ಗೆ ವರದಿಯಾಗಿದೆ.

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್‌ ಸಹಿತ ಅವರ ​ಬಣದಲ್ಲಿ ಗುರುತಿಸಿಕೊಂಡಿರುವ ಬಹುತೇಕ ಎಲ್ಲಾ ನಾಯಕರೂ ಇಂದಿನ ವಿಜಯೇಂದ್ರ ಅವರ ಅಧಿಕಾರ ಸ್ವೀಕಾರ ಕಾರ್ಯಕ್ರಮಕ್ಕೆ ಗೈರಾಗಿದ್ದಾರೆ ಎನ್ನಲಾಗಿದೆ. 

ಈ ಬಗ್ಗೆ ಸ್ಪಷ್ಟನೆ ನೀಡಿರುವ ಶಾಸಕ ಎಸ್​.ಟಿ ಸೋಮಶೇಖರ್​ , ಪೊಲೀಸ್ ಠಾಣೆ ಉದ್ಘಾಟನೆಗೆ ಮೊದಲೇ ದಿನಾಂಕ ನಿಗದಿಪಡಿಸಲಾಗಿತ್ತು. ನನ್ನ ಕ್ಷೇತ್ರದ್ದೇ ಕಾರ್ಯಕ್ರಮ ಇದ್ದ ಕಾರಣ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಾಧ್ಯವಾಗಿಲ್ಲ ಎಂದಿದ್ದಾರೆ.

ಎರಡು ದಿನಗಳ ಹಿಂದೆ ಮಾಜಿ ಸಚಿವ  ಸಿ.ಟಿ ರವಿ ಅವರೂ   ನ.15ಕ್ಕೆ ನಾನು ರಾಜ್ಯದಲ್ಲಿ ಇರುವುದಿಲ್ಲ. ಮಧ್ಯಪ್ರದೇಶ ಚುನಾವಣೆ ಹಿನ್ನೆಲೆಯಲ್ಲಿ ನಾನು ಅಲ್ಲಿ ಕ್ಯಾಂಪೇನ್‍ಗೆ ಹೋಗಬೇಕಿದೆ. ರಾತ್ರಿವರೆಗೂ ಕ್ಯಾಂಪೇನ್ ಇರುವುದರಿಂದ ನನಗೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಾಧ್ಯವಿಲ್ಲ ಎಂದು ತಿಳಿಸಿದ್ದರು.


Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News