ವಿಪಕ್ಷಗಳ ಸಭೆ; ಬೆಂಗಳೂರಿಗೆ ಆಗಮಿಸಿದ ತಮಿಳುನಾಡಿನ ಸಿಎಂ ಸ್ಟಾಲಿನ್ ರನ್ನು ಸ್ವಾಗತಿಸಿದ ಡಿ.ಕೆ ಶಿವಕುಮಾರ್

Update: 2023-07-17 09:47 GMT

ಬೆಂಗಳೂರು: ಇಂದಿನಿಂದ ಎರಡು ದಿನಗಳ ವರೆಗೆ ನಡೆಯಲಿರುವ ವಿರೋಧ ಪಕ್ಷಗಳ ಸಭೆಗೆ ಪಾಲ್ಗೊಳ್ಳಲು ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಿದ ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರನ್ನು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸ್ವಾಗತಿಸಿದರು. 

 ಸ್ಟಾಲಿನ್ ಅವರಿಗೆ ಹೂ ಗುಚ್ಛ ನೀಡಿ ಆತ್ಮೀಯವಾಗಿ ಬರಮಾಡಿಕೊಂಡ ಡಿಕೆಶಿ, ಕೆಲ ಕಾಲ  ಕುಶಲೋಪರಿ ವಿಚಾರಿಸಿದರು. ಈ ಸಂದರ್ಭದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಉಪಸ್ಥಿತರಿದ್ದರು. 

2024ರ ಲೋಕಸಭಾ ಚುನಾವಣೆಗೆ ಜಂಟಿ ಕಾರ್ಯತಂತ್ರವನ್ನು ರೂಪಿಸುವ ಸಲುವಾಗಿ ವಿರೋಧ ಪಕ್ಷಗಳು ಸೋಮವಾರದಿಂದ ಎರಡು ದಿನಗಳ ಕಾಲ ಬೆಂಗಳೂರಿನಲ್ಲಿ ಚರ್ಚಿಸಲಿವೆ.

 

 

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News