ಮೈಕ್ರೋ ಫೈನಾನ್ಸ್‌ಗಳಿಂದ ತೊಂದರೆ | ಕಿರುಕುಳಕ್ಕೆ ಕಡಿವಾಣ ಹಾಕುವ ಸುಗ್ರೀವಾಜ್ಞೆಗೆ ಸಂಪುಟ ಒಪ್ಪಿಗೆ

Update: 2025-01-30 17:44 IST
ಮೈಕ್ರೋ ಫೈನಾನ್ಸ್‌ಗಳಿಂದ ತೊಂದರೆ | ಕಿರುಕುಳಕ್ಕೆ ಕಡಿವಾಣ ಹಾಕುವ ಸುಗ್ರೀವಾಜ್ಞೆಗೆ ಸಂಪುಟ ಒಪ್ಪಿಗೆ
  • whatsapp icon

ಬೆಂಗಳೂರು : ರಾಜ್ಯದಲ್ಲಿ ಮೈಕ್ರೊ ಫೈನಾನ್ಸ್‌ ಸಂಸ್ಥೆಗಳ ಕಿರುಕುಳ ತಡೆಗಟ್ಟಲು ರಾಜ್ಯ ಸರಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಈ ನಿಟ್ಟಿನಲ್ಲಿ ಸುಗ್ರೀವಾಜ್ಞೆ ತರಲು ಸಚಿವ ಸಂಪುಟ ಸಭೆಯಲ್ಲಿ ಮಸೂದೆಗೆ ಅನುಮೋದನೆ ನೀಡಲಾಗಿದೆ.

ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಮೈಕ್ರೋ ಫೈನಾನ್ಸ್‌ಗಳ ಉಪಟಳಕ್ಕೆ ಕಡಿವಾಣ​ ಹಾಕುವ ಸುಗ್ರೀವಾಜ್ಞೆ ಜಾರಿಗೆ ತರಲು ಒಪ್ಪಿಗೆ ಸೂಚಿಸಲಾಗಿದೆ.

ಸಚಿವ ಸಂಪುಟದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಎಚ್​.ಕೆ.ಪಾಟೀಲ್, ಅಮಾನವೀಯವಾಗಿ ಮೈಕ್ರೋ ಪೈನಾನ್ಸ್​ನಿಂದ ಸಾಲ ವಸೂಲಿ ಆಗುತ್ತಿದೆ. ಇಂದು ಮುಖ್ಯಮಂತ್ರಿಗಳು ಹಿರಿಯ ಸಚಿವರ ಸಭೆ ಕರೆದಿದ್ದಾರೆ. ಕೆಲವು ಮಹತ್ವದ ವಿಚಾರ ಇರುವುದರಿಂದ ಸಭೆ ಮಾಡುತ್ತಿದ್ದೇವೆ. ಸುಗ್ರೀವಾಜ್ಞೆ ತರಲು ಮುಖ್ಯಮಂತ್ರಿಗೆ ಸಚಿವ ಸಂಪುಟ ಅಧಿಕಾರವನ್ನು ನೀಡಿದೆʼ ಎಂದು ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News