ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ನಾನು ಸಿದ್ಧ ಎಂದ ಸಚಿವ ಕೆ.ಎನ್.ರಾಜಣ್ಣ

Update: 2023-08-04 10:15 GMT

ತುಮಕೂರು: ಮುಂಬರಲಿರುವ ಲೋಕಸಭಾ ಚುನಾವಣೆಗೆ ನಿಲ್ಲಲು ನಾನು ಸಿದ್ಧ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. 

ಶುಕ್ರವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಕ್ಷದ ವರಿಷ್ಠರು ಸೂಚನೆ ಕೊಟ್ಟರೆ ಲೋಕಸಭಾ ಚುನಾವಣೆಗೆ ನಿಲ್ಲಲು ನಾನು ಸಿದ್ಧ ಎಂದು ಹೇಳಿದರು. 

ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ನಡೆದ ಕಾಂಗ್ರೆಸ್ ನಾಯಕರ ಸಭೆಯಲ್ಲಿ ರಾಜ್ಯದಿಂದ 20 ಸೀಟುಗಳನ್ನು ಗೆಲ್ಲಿಸಿ ಕೊಡುವುದಾಗಿ ಭರವಸೆ ನೀಡಿದ್ದೇವೆ ಎಂದರು. 

ʼಸಭೆಯಲ್ಲಿ ಸಚಿವರಿಗೆ ಪ್ರತಿ ಕ್ಷೇತ್ರದ ಜವಾಬ್ದಾರಿ ನೀಡುವ ಬಗ್ಗೆ ಚರ್ಚೆ ಆಗಿದೆ. ನಾನು ಹಾಸನದ ಉಸ್ತುವಾರಿ ಇರೋದರಿಂದ ಅಲ್ಲಿ ನಾನು ಜವಾಬ್ದಾರಿ ವಹಿಸಿಕೊಳ್ಳುತ್ತೇನೆʼ ಎಂದು ತಿಳಿಸಿದರು. 

ಸರ್ಕಾರದ ವಿರುದ್ಧ ಕುಮಾರಸ್ವಾಮಿಯವರ ವರ್ಗಾವಣೆ ದಂಧೆ ಆರೋಪ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು,  ʼಕುಮಾರಸ್ವಾಮಿ ಅವರ ಅನುಭವವನ್ನು ಹೇಳಿಕೊಂಡಿದ್ದಾರೆ. ಸತ್ಯಹರಿಶ್ಚಂದ್ರ ಹೇಳಿದ ಮೇಲೆ ನಾವು ಹೇಳುವಷ್ಟು ಬುದ್ಧಿವಂತರಲ್ಲ. ಯಾರು ಭ್ರಷ್ಟಾಚಾರ ಬಗ್ಗೆ ಮಾತಾಡ್ತಿದ್ದಾರೋ ಅವರೇ ಭ್ರಷ್ಟಾಚಾರಿಗಳುʼ ಎಂದು ಹೇಳಿದರು. 


Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News