ಆಪ್ತರ ಜೊತೆ ವಿದೇಶಕ್ಕೆ ತೆರಳಿದ ಸಚಿವ ಸತೀಶ್ ಜಾರಕಿಹೊಳಿ

Update: 2023-11-19 07:23 GMT

ಸತೀಶ್ ಜಾರಕಿಹೊಳಿ

ಬೆಂಗಳೂರು: ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ತಮ್ಮ ಆಪ್ತರೊಂದಿಗೆ ವಿದೇಶಕ್ಕೆ ತೆರಳಿದ್ದಾರೆ. ಅವರ ಈ ನಡೆ ರಾಜ್ಯ ರಾಜಕೀಯ ವಲಯದಲ್ಲಿ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ

ಬೆಂಗಳೂರಿನ ಕೆಂಪೇಗೌಡ ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಶುಕ್ರವಾರ ತಡರಾತ್ರಿ ತಮ್ಮ ಮಗ ಹಾಗೂ ಕೆಲವು ಆಪ್ತರ ಜತೆ ಪ್ರಯಾಣ ಬೆಳೆಸಿದ್ದಾರೆ ಎಂದು ಜಾರಕಿಹೊಳಿ ಅವರ ಆಪ್ತ ಮೂಲಗಳು ತಿಳಿಸಿವೆ.

ಈ ಹಿಂದೆ ತಮ್ಮ ಆಪ್ತ ಶಾಸಕರ ಜೊತೆ ಸಚಿವರು ದುಬೈಗೆ ಹೋಗಲಿದ್ದಾರೆ ಎಂದು ಹೇಳಲಾಗುತ್ತಿತ್ತು. ಇದು ಪಕ್ಷದಲ್ಲಿ ಕೆಲವರ ಅಸಮಾಧಾನಕ್ಕೂ ಕಾರಣವಾಗಿತ್ತು. ಆದರೆ ಇದೀಗ ಶಾಸಕರ ಬದಲು ತಮ್ಮ ಆಪ್ತರೊಂದಿಗೆ ಪ್ರವಾಸಕ್ಕ ತೆರಳಿದ್ದಾರೆ.‌

ದಸರಾ ಸಂದರ್ಭದಲ್ಲಿ ಕೆಲವು ಶಾಸಕರ ಜೊತೆ ಮೈಸೂರಿಗೆ ತೆರಳಲು ಸತೀಶ್ ಜಾರಕಿಹೊಳಿ ಮುಂದಾಗಿದ್ದರು. ಆದರೆ, ಈ ರೀತಿ ಗುಂಪುಕಟ್ಟಿಕೊಂಡು ಹೋಗುವುದರಿಂದ ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ ಎಂಬ ಸಂದೇಶ ರವಾನೆಯಾಗಿ, ವಿರೋಧ ಪಕ್ಷಗಳಿಗೆ ಅಸ್ತ್ರ ಆಗಬಹುದೆಂದು ಪಕ್ಷದ ವರಿಷ್ಠರು ಎಚ್ಚರಿಕೆ ನೀಡಿದ್ದ ಕಾರಣ ಅವರು ಆ ಪ್ರವಾಸದಿಂದ ಹಿಂದೆ ಸರಿದಿದ್ದರು ಎಂದು ಹೇಳಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News