ಮೋದಿ ಕೇವಲ ತಮಿಳುನಾಡು, ಕರ್ನಾಟಕಕ್ಕೆ ಮಾತ್ರ ಪ್ರಧಾನಿ ಅಲ್ಲ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Update: 2023-09-26 10:31 GMT

ಮೈಸೂರು: ʼʼಮೋದಿ ಕೇವಲ ತಮಿಳುನಾಡು, ಕರ್ನಾಟಕಕ್ಕೆ ಪ್ರಧಾನಿ ಅಲ್ಲ, ಬೇರೆ ರಾಜ್ಯಗಳ ಜಲ ವಿವಾದ ಕೂಡ ಪ್ರಧಾನಿಗಳು ಬಗೆಹರಿಸಬೇಕಿದೆʼʼ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ಧಾರೆ. 

ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ʼʼರಾಜ್ಯ ಸರಕಾರದ ಬೇಜವಾಬ್ದಾರಿಯಿಂದಲೇ ಕಾವೇರಿ ನದಿ ನೀರಿನ ವಿವಾದ ಉದ್ಭವವಾಗಿದೆ. ಕಾಂಗ್ರೆಸ್​​ನವರು ತಮಿಳುನಾಡನ್ನು ಓಲೈಸಿಕೊಳ್ಳಲು ಮುಂದಾಗಿದ್ದಾರೆʼʼ ಎಂದು ಆಕ್ರೋಶ ವ್ಯಕ್ತಪಡಿಸಿದರು.  

ಸರಕಾರ ಸರಿಯಾಗಿ ಕಾವೇರಿ ಕೊಳ್ಳದ ಅಧ್ಯಯನ ನಡೆಸದೇ ಇರಬಹುದು. ಹೀಗಾಗಿಯೇ ರಾಜ್ಯ ಸರಕಾರ ಪ್ರಾಧಿಕಾರಕ್ಕೆ ಸೂಕ್ತ ಮಾಹಿತಿ ನೀಡಿಲ್ಲ ಎಂದ ಅವರು,  ನ್ಯಾಯಾಲಯಕ್ಕೂ ಕೂಡ ಸೂಕ್ತ ಅಂಕಿ ಅಂಶ ನೀಡಿಲ್ಲ. ಇದರ ಬದಲು ಪ್ರಧಾನಿಯನ್ನು ದೂರುವ ಕೆಲಸ ಮಾಡುತ್ತಿದ್ದಾರೆʼʼ ಎಂದು ದೂರಿದರು. 

ʼʼಕೇಂದ್ರ ಸರಕಾರ ರಾಜ್ಯದ ರೈತರು, ಕನ್ನಡ ಸಂಘಟನೆಗಳ ಜೊತೆಗಿದೆʼʼ

ʼʼಕೇಂದ್ರ ಸರಕಾರ, ಬಿಜೆಪಿ ಪಕ್ಷ ರಾಜ್ಯದ ರೈತರು, ಕನ್ನಡ ಸಂಘಟನೆಗಳ ಜೊತೆಗಿದೆ. ಇದರಲ್ಲಿ ಯಾವುದೇ ಅನುಮಾನ ಬೇಡʼʼ ಎಂದು ಶೋಭಾ ಕರಂದ್ಲಾಜೆ ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News