ಮುಂಗಾರು ಅಧಿವೇಶನ | ಮೂರು ವಿಧೇಯಕಗಳಿಗೆ ಅಂಗೀಕಾರ

Update: 2024-07-23 15:35 GMT

ಬೆಂಗಳೂರು : 2024ನೇ ಸಾಲಿನ ರಾಜ್ಯ ವಿಧಾನ ಮಂಡಲ(ಅನರ್ಹತಾ ನಿವಾರಣಾ, ಎರಡನೆ ತಿದ್ದುಪಡಿ) ವಿಧೇಯಕ ಹಾಗೂ 2024ನೆ ಸಾಲಿನ ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ವಿಧೇಯಕವನ್ನು ಮಂಗಳವಾರ ವಿಧಾನಸಭೆಯಲ್ಲಿ ಅಂಗೀಕರಿಸಲಾಯಿತು.

ವಿಧಾನ ಪರಿಷತ್ತಿನಿಂದ ತಿದ್ದುಪಡಿಗಳೊಂದಿಗೆ ಅಂಗೀಕೃತವಾಗಿರುವ 2024ನೆ ಸಾಲಿನ ಸಹಕಾರ ತಿದ್ದುಪಡಿ ವಿಧೇಯಕವನ್ನು ವಿರೋಧಿಸಿ ಬಿಜೆಪಿ ಸಭಾತ್ಯಾಗ ಮಾಡಿತು. ಬಳಿಕ ವಿಧೇಯಕವನ್ನು ಅಂಗೀಕರಿಸಲಾಯಿತು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News