ಮುಡಾ ಪ್ರಕರಣ | ವಿಪಕ್ಷದವರು ದೇಸಾಯಿ ಆಯೋಗಕ್ಕೆ ಮಾಹಿತಿ ನೀಡಲಿ : ಜಿ.ಪರಮೇಶ್ವರ್‌

Update: 2024-08-22 07:43 GMT

ಬೆಂಗಳೂರು : ವಿರೋಧ ಪಕ್ಷದ ನಾಯಕರು ಮುಡಾ ವಿಚಾರದ ಬಗ್ಗೆ ಸಾರ್ವಜನಿಕವಾಗಿ ಹೇಳಿಕೆ ನೀಡಿ ಗೊಂದಲ ಸೃಷ್ಟಿಸುವ ಬದಲು ದೇಸಾಯಿ ಆಯೋಗಕ್ಕೆ ಮಾಹಿತಿ ನೀಡಲಿ‌ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಅವರು ಹೇಳಿದರು.

ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ವಿಪಕ್ಷದವರು ಪದೇಪದೇ ಅನೇಕ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಮುಡಾ ಬಗ್ಗೆ ದೇಸಾಯಿ ಆಯೋಗವು ತನಿಖೆ ಆರಂಭಿಸಿದೆ. ಮುಡಾ ಅಕ್ರಮದ ಬಗ್ಗೆ ಮಾಹಿತಿ ಇದ್ದರೆ, ಆಯೋಗಕ್ಕೆ ನೀಡಲಿ. ಸಾರ್ವಜನಿಕವಾಗಿ ಗೊಂದಲ ಉಂಟು ಮಾಡುವ ಹೇಳಿಕೆ ನೀಡುವುದು ಬೇಡ ಎಂದು ಸಲಹೆ ನೀಡಿದರು.

ಕೋವಿಡ್ ಸಂದರ್ಭದಲ್ಲಿ ನಡೆದ ಹಗರಣಕ್ಕೆ ಸಂಬಂಧಿಸಿದಂತೆ ಜಸ್ಟೀಸ್ ಮೈಕಲ್ ಪೊನ್ನಾ ಅವರ ವರದಿ ಬರುವರೆಗೂ ಏನನ್ನು ಮಾಡಲಾಗುವುದಿಲ್ಲ. ವರದಿಯಲ್ಲಿ ಏನು ಶಿಫಾರಸ್ಸು ಮಾಡುತ್ತಾರೆ ಎಂಬುದನ್ನು ಗಮನಿಸಿ, ಮುಂದಿನ ಕ್ರಮ ಕೈಗೊಳ್ಳುತ್ತೇವೆ. ಕ್ರಿಮಿನಲ್ ಪ್ರೊಸಿಡಿಂಗ್ಸ್ ಮಾಡಬೇಕು ಅಂತ ವರದಿಯಲ್ಲಿ ಬಂದರೆ, ಅದರಂತೆ ಕ್ರಮ ಕೈಗೊಳ್ಳಲಾಗುವುದು ಎಂದರು.

ರಾಜ್ಯಪಾಲರಿಗೆ ಬೆದರಿಕೆ ಇದೆ ಎಂಬ ಸನ್ನಿವೇಶ ಸೃಷ್ಟಿಸಿದ್ದೇ ಬಿಜೆಪಿ :

ರಾಜ್ಯಪಾಲರು ರಕ್ಷಣೆ ಕೇಳಿದ ಹಿನ್ನೆಲೆಯಲ್ಲಿ ಭದ್ರತೆ ಒದಗಿಸಲಾಗಿದೆ. ಅವರಿಗೆ ಯಾವ ರೀತಿಯ ಬೆದರಿಕೆ ಇದೆ ಎಂಬುದು ನನ್ನ ಗಮನಕ್ಕೆ ಬಂದಿಲ್ಲ. ರಾಜ್ಯಪಾಲರಿಗೆ ಬೆದರಿಕೆ ಇದೆ ಎಂಬ ಸನ್ನಿವೇಶವನ್ನು ಬಿಜೆಪಿಯವರು ಸೃಷ್ಟಿ ಮಾಡಿದ್ದಾರೆ ಎಂದು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News