ಮೂಡಿಗೆರೆ | ಬೈಕಿಗೆ ಲಾರಿ ಢಿಕ್ಕಿ; ಮಗ ಸ್ಥಳದಲ್ಲೇ ಮೃತ್ಯು, ತಂದೆಗೆ ಗಂಭೀರ ಗಾಯ

Update: 2023-11-13 17:55 GMT

ಮೂಡಿಗೆರೆ: ಬೈಕಿಗೆ ತರಕಾರಿ ತುಂಬಿದ ಲಾರಿ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು, ಮತ್ತೊಬ್ಬರು ಗಂಭೀರ ಗಾಯಗೊಂಡಿರುವ ಘಟನೆ ಮೂಡಿಗೆರೆ ತಾಲೂಕಿನ ಬಿದರಹಳ್ಳಿ ಪಟ್ಟಣದಲ್ಲಿ ಸೋಮವಾರ ರಾತ್ರಿ ವರದಿಯಾಗಿದೆ. 

ತಾಲೂಕಿನ ಕೆಂಜಿಗೆ ಸಮೀಪದ ಬಾಳೆಹಳ್ಳಿ ನಿವಾಸಿ ಮಂಜುನಾಥ್ (30) ಮೃತ ಯುವಕನಾಗಿದ್ದು, ಇವರು ತಂದೆ ಜೊತೆ ಬೈಕಿನಲ್ಲಿ ಹೋಗುತ್ತಿದ್ದರು ಎಂದು ಹೇಳಲಾಗಿದೆ. 

ಮಂಜುನಾಥ್ ಅವರ ತಂದೆಯ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ. 

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News