ಮೂಡಿಗೆರೆ | ಪ್ರಪಾತಕ್ಕೆ ಉರುಳಿದ ಬಸ್: ಮಹಿಳೆ ಮೃತ್ಯು, ಐವರಿಗೆ ಗಂಭೀರ ಗಾಯ

Update: 2023-11-04 04:31 GMT

ಚಿಕ್ಕಮಗಳೂರು, ನ.4: ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿಬಿದ್ದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟ, ಐವರು ಗಂಭೀರವಾಗಿ ಗಾಯಗೊಂಡ ಘಟನೆ ಮೂಡಿಗೆರೆ ತಾಲೂಕಿನ ಚೀಕನಹಳ್ಳಿ - ಕಸ್ಕೇಬೈಲು ಕ್ರಾಸ್ ಬಳಿ ಇಂದು ಮುಂಜಾವ ಸಂಭವಿಸಿದೆ.

ಮೃತರನ್ನು ಬೆಂಗಳೂರಿನ ಯಲಹಂಕ ನಿವಾಸಿ ಸುರೇಖಾ(45) ಎಂದು ಗುರುತಿಸಲಾಗಿದೆ.

ಬೆಂಗಳೂರಿನಿಂದ ಬೆಂಗಳೂರು-ಹಾಸನ-ಮೂಡಿಗೆರೆ ಮಾರ್ಗವಾಗಿ ಹೊರನಾಡಿಗೆ ಪ್ರವಾಸ ಹೊರಟಿದ್ದ ಈ ಬಸ್ಸಿನಲ್ಲಿ 48ಕ್ಕೂ ಹೆಚ್ಚು ಪ್ರವಾಸಿಗರಿದ್ದರು. ಇಂದು ಬೆಳಗಿನ ಜಾವ 4:45ರ ವೇಳೆ ಗೋಣಿಬೀಡು ಪೊಲೀಸ್ ಠಾಣಾ ವ್ಯಾಪ್ತಿಯ ಚೀಕನಹಳ್ಳಿ - ಕಸ್ಕೇಬೈಲು ಕ್ರಾಸ್ ಬಳಿ ಬಸ್ ತಲುಪಿದಾಗ ಈ ಅಪಘಾತ ಸಂಭವಿಸಿದೆ.

ಗಾಯಾಳುಗಳನ್ನು ಮೂಡಿಗೆರೆ, ಬೇಲೂರು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಬಗ್ಗೆ ಗೋಣಿಬೀಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


 



Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News