ಮೂಡಿಗೆರೆ: ಪತ್ನಿಯನ್ನು ಹತ್ಯೆಗೈದ ಪತಿ

Update: 2023-10-14 05:03 GMT

ಘಟನಾ ಸ್ಥಳದಲ್ಲಿ ಜಮಾಯಿಸಿರುವ ಜನರು 

ಚಿಕ್ಕಮಗಳೂರು: ಪತ್ನಿಯನ್ನು‌ ಪತಿಯೇ ಹತ್ಯೆ ಮಾಡಿರುವ ಘಟನೆ ಶುಕ್ರವಾರ ರಾತ್ರಿ ಮೂಡಿಗೆರೆ ತಾಲೂಕಿನ ಕಿರುಗುಂದ ಗ್ರಾಮದಲ್ಲಿ ವರದಿಯಾಗಿದೆ.

ಕಿರುಗುಂದ ಗ್ರಾಮದ ಪರಿಶಿಷ್ಟರ ಬಡಾವಣೆ ನಿವಾಸಿ ಪದ್ಮಾಕ್ಷಿ (40)  ಕೊಲೆಗೀಡಾದ ಮಹಿಳೆಯಾಗಿದ್ದು, ಪತಿ ಚಂದ್ರು ಪತ್ನಿಯನ್ನು ಹತ್ಯೆ ಮಾಡಿದ ಆರೋಪಿಯಾಗಿದ್ದಾನೆ.

ಕಳೆದ ರಾತ್ರಿ ಚಂದ್ರು ಕುಡಿದು ಮನೆಗೆ ಬಂದಿದ್ದು, ಕುಡಿತದ ವಿಚಾರಕ್ಕೆ ಪತಿ, ಪತ್ನಿ‌ ನಡುವೆ ಗಲಾಟೆ ನಡೆದಿದೆ. ಇಬ್ಬರ ನಡುವಿನ ಜಗಳ ತಾರಕಕ್ಕೇರಿದ್ದ ವೇಳೆ ಕುಪಿತನಾದ ಪತಿ ಚಂದ್ರು ಮನೆಯಲ್ಲಿದ್ದ ಕೊಡಲಿಯಿಂದ ಪತ್ನಿ ಪದ್ಮಾಕ್ಷಿ ಮೇಲೆ ಹಲ್ಲೆ ಮಾಡಿದ್ದ. ಹಲ್ಲೆಯಿಂದ ತೀವ್ರವಾಗಿ ಗಾಯಗೊಂಡಿದ್ದ ಪದ್ಮಾಕ್ಷಿ ಮನೆಯಂಗಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಪತ್ನಿ ಮೃತಪಟ್ಟಿರುವುದು ಗೊತ್ತಾಗದೇ ಪತಿ ಚಂದ್ರು‌ ಮನೆಯೊಳಗೆ ಮಲಗಿದ್ದು, ಬೆಳಗ್ಗೆ ವಿಷಯ ಗೊತ್ತಾಗಿದೆ ಎಂದು ಹೇಳಲಾಗಿದೆ.

ಗೋಣಿಬೀಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳ ಪರಿಶೀಲನೆ ನಡೆಸಿದ ಪೊಲೀಸರು ಆರೋಪಿ ಚಂದ್ರು ನನ್ನು ವಶಕ್ಕೆ ಪಡೆದಿದ್ದಾರೆಂದು ತಿಳಿದು ಬಂದಿದೆ. 

 

 

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News