ಮೈಸೂರು: ಕಾಂಗ್ರೆಸ್ ಜನಾಂದೋಲನಕ್ಕೆ ಕ್ಷಣಗಣನೆ

Update: 2024-08-09 06:35 GMT

ಮೈಸೂರು: ಕಾಂಗ್ರೆಸ್ ವತಿಯಿಂದ ಆಯೋಜಿಸಿರುವ ಜನಾಂದೋಲನಾ ಸಮಾವೇಶಕ್ಕೆ ಕ್ಷಣಗಣನೆ ಆರಂಭವಾಗಿದ್ದು ಜನಸಾಗರವೇ ಹರಿದು ಬರುತ್ತಿದೆ.

ಬಿಜೆಪಿ ಮತ್ತು ಕಾಂಗ್ರೆಸ್ ಹಮ್ಮಿಕೊಂಡಿರುವ ಮೈಸೂರು ಚಲೊ ಪಾದಯಾತ್ರೆಯ ವಿರುದ್ಧ ಕೆಪಿಸಿಸಿ ವತಿಯಿಂದ ನಗರದ ಮಹರಾಜ ಕಾಲೇಜು ಮೈದಾನದಲ್ಲಿ ಶುಕ್ರವಾರ ನಡೆಯಲಿರುವ ಸಮಾವೇಶಕ್ಕೆ ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ, ಮಡಿಕೇರಿ ಭಾಗಗಳಿಂದ ಜನರು ಸರ್ಕಾರಿ, ಖಾಸಗಿ ಬಸ್ ಮತ್ತು ಕಾರುಗಳಲ್ಲಿ ತಂಡೋಪ ತಂಡವಾಗಿ ಆಗಮಿಸುತ್ತಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ತವರಿನಲ್ಲಿ ನಡೆಯುತ್ತಿರುವ ಸಮಾವೇಶಕ್ಕೆ ಕಾಂಗ್ರೆಸ್ ನಾಯಕರುಗಳು, ಪಕ್ಷದ ಕಾರ್ಯಕರ್ತರಲ್ಲದೆ ಸಾಕಷ್ಟು ಸಂಖ್ಯೆಯಲ್ಲಿ ಸಾರ್ವಜನಿಕರು ಸಿದ್ಧರಾಮಯ್ಯ ಬೆಂಬಲಿಗರು ಆಗಮಿಸುತ್ತಿದ್ದಾರೆ.

ಇಡೀ ಮೈಸೂರು ಜನಗುಳಿಯಿಂದ ತುಂಬಿದ್ದು ಸಾಕಷ್ಟು ಸಂಖ್ಯೆಯಲ್ಲಿ ಬಸ್ ಗಳಲ್ಲಿ ಆಗಮಿಸುತ್ತಿರುವುದರಿಂದ ಮೈಸೂರು ನಗರದಲ್ಲಿ ಸಂಚಾರ ದಟ್ಟಣೆ ಉಂಟಾಗಿದೆ. ಪೊಲೀಸರು ಇದರ ನಿಯಂತ್ರಣಕ್ಕೆ ಹರ ಸಾಹಸ ಪಡುತ್ತಿದ್ದಾರೆ.

 

 

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News