ಬಹುಪಾಲು ತೆರಿಗೆ ಪಡೆದು ರಾಜ್ಯದ ಪಾಲಿನ ತೆರಿಗೆ ಮರಳಿಸುತ್ತಿಲ್ಲ: ಸಚಿವ ದಿನೇಶ ಗುಂಡೂರಾವ್

Update: 2024-03-07 08:02 GMT

ಕಲಬುರಗಿ, ಮಾ.7: ರಾಜ್ಯದಿಂದ ಬಹುಪಾಲು ತೆರಿಗೆ ಪಡೆಯುವ ಕೇಂದ್ರ ಸರಕಾರ ರಾಜ್ಯದ ಪಾಲಿನ ತೆರಿಗೆ ನೀಡುತ್ತಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗುರುವಾರ ಕಲಬುರಗಿ ನಗರದ ನವೀಕೃತ ಶರಬಸವೇಶ್ವರ ಕೆರೆಯ ಸಾರ್ವಜನಿಕ ಉದ್ಯಾನವನ ಉದ್ಘಾಟನೆಗೆ ಆಗಮಿಸಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಪಾಲಿನ ತೆರಿಗೆ ಹಣ ನೀಡದೆ ಕೇಂದ್ರ ಸರಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿದರು.

ರಾಜ್ಯದಲ್ಲಿ ಭೀಕರ ಬರಗಾಲವಿದೆ. ಅನ್ನದಾತ ಸಂಕಷ್ಟದಲ್ಲಿದ್ದಾನೆ. ಬರಗಾಲ ಪರಿಹಾರ ಹಣ ಸಹ ಬಿಡುಗಡೆ ಮಾಡುತ್ತಿಲ್ಲ. ನರೇಗಾ ಕೂಲಿ ದಿನ ಹೆಚ್ಚಿಸುತ್ತಿಲ್ಲ. ಹಲವಾರು ಬಾರಿ ಕೇಂದ್ರ ಸರಕಾರಕ್ಕೆ ಮನವಿ ಮಾಡಿದ್ರು ಪ್ರಯೋಜನವಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕೆ.ಕೆ.ಆರ್.ಡಿ.ಬಿ. ಅಧ್ಯಕ್ಷ ಡಾ.ಅಜಯ್ ಸಿಂಗ್ ಇದ್ದರು.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News