ನಿಗಮ, ಮಂಡಳಿ ನೇಮಕದಲ್ಲಿ ಅಭಿಪ್ರಾಯ ಕೇಳಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್

Update: 2024-01-23 13:29 GMT

ಬೆಂಗಳೂರು: ನಿಗಮ, ಮಂಡಳಿಗಳಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರರನ್ನು ನೇಮಕ ಮಾಡುವ ಪ್ರಕ್ರಿಯೆ ವೇಳೆ ನನ್ನ ಅಭಿಪ್ರಾಯವನ್ನು ಯಾರು ಕೇಳಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

ಮಂಗಳವಾರ ಸದಾಶಿವನಗರದ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ಒಂದೆರಡು ಹೆಸರು ಕೊಡಿ ಅಂದಾಗ ಕೊಟ್ಟಿದ್ದೇನೆ. ಆದರೆ, ನಮ್ಮ ಜೊತೆ ಮಾತಾಡಿ ಪಟ್ಟಿ ಮಾಡಿಲ್ಲ. ಜಿಲ್ಲಾ ಮಟ್ಟದಲ್ಲಿ ಪಕ್ಷ ಸಂಘಟನೆಯಲ್ಲಿ ತೊಡಗಿರುವ ಮುಖಂಡರ ಕೆಲಸ ನಮಗೆ ಗೊತ್ತಿರುತ್ತೆ. ಅಲ್ಲದೆ, ಯಾರು ಯಾರು ಕೆಲಸ ಮಾಡಿದ್ದಾರೆ ಎಂಬುದು ನನಗೆ ಗೊತ್ತಿದೆ. ಹತ್ತಾರು ವರ್ಷ ಪಕ್ಷಕ್ಕೆ ದುಡಿದವರಿದ್ದಾರೆ. ಅವರಿಗೆ ಅಧಿಕಾರ ಕೊಡಬೇಕು. ಕೆಲಸ ಮಾಡದವರಿಗೆ ಅಧಿಕಾರ ಕೊಟ್ಟರೆ, ಕೆಲಸ ಮಾಡಿರುವರಿಗೆ ನೋವು, ಅಸಮಾಧಾನವಾಗುತ್ತದೆ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಜಿಲ್ಲಾ ನಾಯಕರ ಜೊತೆ ಮಾತನಾಡಿ ಪಟ್ಟಿ ಮಾಡಬೇಕು. ಅದರೆ ಈಗ ಪಕ್ಷದ ಪ್ರಧಾನ ಕಾರ್ಯದರ್ಶಿಯವರೇ ಮಾಡುತ್ತಿದ್ದಾರೆ. ಹೀಗಾಗಿ ಪಟ್ಟಿ ಸಿದ್ಧಪಡಿಸುವುದು ನಿಧಾನವಾಗಿದೆ. ನಾನು ಸಹ 8 ವರ್ಷ ಪಕ್ಷದ ಅಧ್ಯಕ್ಷನಾಗಿದ್ದೇನೆ. ಯಾರೋ ಯಾವ ರೀತಿ ಕೆಲಸ ಮಾಡಬೇಕು ಎನ್ನುವುದು ಗೊತ್ತಿದೆ ಎಂದು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News