ಬಿಜೆಪಿಗೆ ಹಿಂದಿರುಗುವ ಪ್ರಶ್ನೆಯೇ ಇಲ್ಲ: ಜಗದೀಶ್ ಶೆಟ್ಟರ್

Update: 2024-01-14 12:20 GMT

ಬೆಂಗಳೂರು: ‘ನನ್ನನ್ನು ಮತ್ತೆ ಬಿಜೆಪಿಗೆ ಸೇರಿಸಿಕೊಳ್ಳಬೇಕೆಂಬುದು ಹಲವು ನಾಯಕರ ಆಸೆ. ಆದರೆ, ನಾನು ಯಾವುದೇ ಸಂದರ್ಭದಲ್ಲಿಯೂ ಬಿಜೆಪಿ ಹಿಂದಿರುಗಿ ಹೋಗುವ ಪ್ರಶ್ನೆಯೇ ಇಲ್ಲ. ನನಗೆ ಆಗಿರುವ ಅಪಮಾನವನ್ನು ನಾನೂ ಇನ್ನೂ ಮರೆತಿಲ್ಲ’ ಎಂದು ಮಾಜಿ ಸಿಎಂ ಹಾಗೂ ಪರಿಷತ್ ಸದಸ್ಯ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ.

ರವಿವಾರ ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ‘ನಾನು ಬಿಜೆಪಿ ತೊರೆದ ನಂತರ ಆಗಿರುವ ಹಾನಿ ಬಗ್ಗೆ ಅವರಿಗೆ ಮನವರಿಕೆಯಾಗಿದೆ. ಈ ನಿಟ್ಟಿನಲ್ಲಿ ಕೆಲವರು ನನ್ನನ್ನು ವಾಪಸ್ ಕರೆತರುವ ಪ್ರಯತ್ನದಲ್ಲಿದ್ದಾರೆ. ಆದರೆ, ಪಕ್ಷದ ಮುಖಂಡರು ಯಾರೂ ನನ್ನನ್ನು ಸಂಪರ್ಕಿಸಿಲ್ಲ, ಈ ವಿಷಯದ ಬಗ್ಗೆ ಚರ್ಚೆಯನ್ನೂ ಮಾಡಿಲ್ಲ’ ಎಂದು ಸ್ಪಷ್ಟಣೆ ನೀಡಿದರು.

ಸಂಸದ ಅನಂತ್ ಕುಮಾರ್ ಹೆಗಡೆ ಹದ್ದು ಮೀರಿ ವರ್ತಿಸುತ್ತಿದ್ದು, ಲಕ್ಷ್ಮಣ ರೇಖೆ ದಾಟಿ ಮಾತನಾಡುತ್ತಿದ್ದಾರೆ. ಇಷ್ಟು ದಿನ ಅವರು ನಾಪತ್ತೆಯಾಗಿದ್ದರು. ಇದೀಗ ದಿಢೀರ್ ಪ್ರತ್ಯಕ್ಷರಾಗಿದ್ದಾರೆ. ಲೋಕಸಭಾ ಚುನಾವಣೆ ದೃಷ್ಟಿಯಿಂದ ಸಕ್ರಿಯರಾಗಿದ್ದಾರೆ. ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಮೋದಿ ತಮ್ಮ ಜಿಲ್ಲೆಗೆ ಬಂದಾಗ ಇವರು ಎಲ್ಲಿ ಹೋಗಿದ್ದರು?’ ಎಂದು ಶೆಟ್ಟರ್ ಪ್ರಶ್ನಿಸಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News