ಕುಮಾರಸ್ವಾಮಿ ಬಿಜೆಪಿಯ ಅಧ್ಯಕ್ಷರಾದರೂ ಅಚ್ಚರಿ ಇಲ್ಲ: ಕಾಂಗ್ರೆಸ್ ಲೇವಡಿ

Update: 2023-12-11 14:38 GMT

ಬೆಳಗಾವಿ: ‘ಕುಮಾರಸ್ವಾಮಿಯವರು ಬಿಜೆಪಿಯವರಿಗಿಂತ ಹೆಚ್ಚು ಆರೆಸೆಸ್ಸ್ ಭಕ್ತಿ ಬೆಳೆಸಿಕೊಳ್ಳುತ್ತಿದ್ದಾರೆ, ಅವರು ಕೋಮುವಾದದ ಕಡೆಗೆ ಹೋಗುತ್ತಿರುವ ಸ್ಪೀಡ್ ನೋಡಿದರೆ ಕೆಲವೇ ದಿನಗಳಲ್ಲಿ ಬಿಜೆಪಿಗರನ್ನೇ ಓವರ್ ಟೇಕ್ ಮಾಡಿ ಬಿಜೆಪಿಯ ಅಧ್ಯಕ್ಷರಾದರೂ ಅಚ್ಚರಿ ಇಲ್ಲ’ ಎಂದು ಕಾಂಗ್ರೆಸ್ ಲೇವಡಿ ಮಾಡಿದೆ.

ಸೋಮವಾರ ಎಕ್ಸ್ ನಲ್ಲಿ ಸರಣಿ ಪೋಸ್ಟ್ ಹಾಕಿರುವ ಕಾಂಗ್ರೆಸ್, ‘ಬಿಜೆಪಿಯವರ ಒಳಜಗಳ ಕುಮಾರಸ್ವಾಮಿಯವರಿಗೆ ವರದಾನವಾಗಲಿದೆ, ಬಿಜೆಪಿ ಹೈಕಮಾಂಡ್ ಕುಮಾರಸ್ವಾಮಿಯವರನ್ನು ರಾಜ್ಯ ಬಿಜೆಪಿಗೆ ಪ್ರತಿಷ್ಠಾಪಿಸಿದರೂ ಅತಿಶಯೋಕ್ತಿ ಇಲ್ಲ. ಎಚ್ಚರಾಗಿ ಆರ್.ಅಶೋಕ್, ಬಿ.ವೈ.ವಿಜಯೇಂದ್ರ’ ಎಂದು ವ್ಯಂಗ್ಯವಾಡಿದೆ.

‘ಬಿಜೆಪಿಯಲ್ಲಿ ಸಮನ್ವಯತೆಯ ಕೊರತೆ ಇದೆ ಎನ್ನುವುದನ್ನು ಸ್ವತಃ ಬಿಜೆಪಿ ನಾಯಕರೇ ಒಪ್ಪಿಕೊಂಡಿದ್ದಾರೆ. ಅಸಲಿಗೆ ಇದು ಸಮನ್ವಯತೆಯ ಕೊರತೆಯಲ್ಲ, ಅಂತರ್ಯುದ್ಧದ ಪ್ರಭಾವ. ಬಿಜೆಪಿಯಲ್ಲಿ ಹಲವರಿಗೆ ಆರ್.ಅಶೋಕ್‍ರನ್ನು ಒಪ್ಪಿಕೊಳ್ಳಲಾಗುತ್ತಿಲ್ಲ, ಇನ್ನೂ ಹಲವರಿಗೆ ವಿಜಯೇಂದ್ರ ರನ್ನು ಸಹಿಸಲಾಗುತ್ತಿಲ್ಲ. ಇಷ್ಟು ದಿನ ವಿಪಕ್ಷ ನಾಯಕನಿರಲಿಲ್ಲ, ಈಗ ವಿಪಕ್ಷ ನಾಯಕನಿಗೆ ಬೆಂಬಲವೇ ಇಲ್ಲ. ಒಟ್ಟಿನಲ್ಲಿ ಬಿಜೆಪಿಗೆ ಭವಿಷ್ಯವಿಲ್ಲ’ ಎಂದು ಎಂದು ಕಾಂಗ್ರೆಸ್ ಲೇವಡಿ ಮಾಡಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News