ಮಡಿಕೇರಿ: ತಡೆಗೋಡೆಗೆ ಕಾರು ಢಿಕ್ಕಿ; ಓರ್ವ ಮೃತ್ಯು
Update: 2023-09-03 16:42 GMT
ಮಡಿಕೇರಿ: ವಿದ್ಯುತ್ ಕಂಬ ಮತ್ತು ತಡೆಗೋಡೆಗೆ ಕಾರು ಢಿಕ್ಕಿಯಾದ ಪರಿಣಾಮ ಮೆಕಾನಿಕ್ ಒಬ್ಬರು ಮೃತಪಟ್ಟಿರುವ ಘಟನೆ ನಗರದಲ್ಲಿ ನಡೆದಿದೆ.
ಮೃತಪಟ್ಟವರನ್ನು ನಗರದ ಗಣಪತಿ ಬೀದಿ ನಿವಾಸಿ ಭಾಸ್ಕರ್(67) ಎಂದು ಗುರುತಿಸಲಾಗಿದೆ. ಈದ್ಗಾ ಮೈದಾನದ ಬಳಿಯ ರಸ್ತೆಯಲ್ಲಿ ಪಾದಾಚಾರಿಗಳಿಗೆ ಕಾರು ಢಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.
ಕಾರು ಚಲಾಯಿಸುತ್ತಿದ್ದ ಭಾಸ್ಕರ್ ಅವರು ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ. ಜೊತೆಯಲ್ಲಿ ಪ್ರಯಾಣಿಸುತ್ತಿದ್ದ ಸುಂಟಿಕೊಪ್ಪದ ರವಿ ಪೂಜಾರಿ ಎಂಬುವವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಅಪಘಾತದ ತೀವ್ರತೆಗೆ ವಿದ್ಯುತ್ ಕಂಬ ಮುರಿದು ಬಿದ್ದಿದೆ. ಘಟನಾ ಸ್ಥಳಕ್ಕೆ ನಗರ ಸಂಚಾರಿ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಗೊಂಡಿದ್ದಾರೆ.