ಕುಟುಂಬ ರಾಜಕಾರಣದ ವಿರುದ್ಧ ಮಾತಾಡಲು ಮೋದಿಯವರಿಗೆ ನೈತಿಕತೆ ಇಲ್ಲ: ದಿನೇಶ್ ಗುಂಡೂರಾವ್

Update: 2023-11-11 08:04 GMT

Photo: Facebook

ಬೆಂಗಳೂರು: ಕುಟುಂಬ ರಾಜಕಾರಣದ ವಿರುದ್ಧ ಮಾತಾಡಲು ಮೋದಿಯವರು ಯಾವ ನೈತಿಕತೆಯನ್ನೂ ಉಳಿಸಿಕೊಂಡಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, "ಗಾಜಿನ‌ ಮನೆಯಲ್ಲಿ ಕುಳಿತು ಕಲ್ಲೆಸೆಯುವ ಮುನ್ನ ತಾವೆಲ್ಲಿ‌ ಕುಳಿತಿದ್ದೇವೆ ಎಂಬ ವಾಸ್ತವ‌ ಅರಿಯಬೇಕು. ಬೇರೆಯವರು ಮಾಡಿದರೆ ಅಪರಾಧ, ತಾನು ಮಾಡಿದರೆ ಆದರ್ಶ ಎಂಬ ಭ್ರಮೆ ಒಳ್ಳೆಯದಲ್ಲ‌ ಮೋದಿಯವರೆ" ಎಂದು ಹೇಳಿದ್ದಾರೆ.

ಕುಟುಂಬ ರಾಜಕಾರಣದ ಬಗ್ಗೆ ಪ್ರಧಾನಿ ಮೋದಿಯವರು ಅವಕಾಶ ಸಿಕ್ಕಾಗಲೆಲ್ಲಾ ಮಾತಾಡುತ್ತಾರೆ. ಮೊನ್ನೆಯಷ್ಟೆ ಮಧ್ಯಪ್ರದೇಶದ ಚುನಾವಣಾ ಪ್ರಚಾರದಲ್ಲಿ ಮೋದಿಯವರು ಕುಟುಂಬ ರಾಜಕಾರಣದ ವಿರುದ್ಧ ಗಂಟಲು ಶೋಷಣೆ ಮಾಡಿಕೊಂಡಿದ್ದರು. ಆದರೆ ಈಗ ಮಾಜಿ ಸಿಎಂ ಬಿಎಸ್‌ಯಡಿಯೂರಪ್ಪ ಅವರ ಮಗ ವಿಜಯೇಂದ್ರ ಬಿಜೆಪಿಯ ರಾಜ್ಯಾಧ್ಯಕ್ಷರಾಗಿದ್ದಾರೆ. ಇದ್ಯಾವ ರಾಜಕಾರಣ ಮೋದಿಯವರೆ? ಎಂದು ಪ್ರಶ್ನಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News