ಬಿಎಸ್‌ವೈ ವಿರುದ್ಧದ ಪೊಕ್ಸೋ‌ ಪ್ರಕರಣ | ನೂತನ ಎಸ್.ಪಿ‌‌.ಪಿಯಾಗಿ ಪ್ರೊ.ರವಿವರ್ಮ ಕುಮಾರ್ ನೇಮಕ

Update: 2024-09-09 11:05 GMT

ಬಿ.ಎಸ್.ಯಡಿಯೂರಪ್ಪ

ಬೆಂಗಳೂರು: ತಮ್ಮ‌ ವಿರುದ್ಧದ ಪೊಕ್ಸೋ ಪ್ರಕರಣ ರದ್ದು ಕೋರಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಸೆ.19ಕ್ಕೆ ಮುಂದೂಡಿದೆ.

ಬಿ.ಎಸ್.ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಏಕಸದಸ್ಯ ಪೀಠ ನಡೆಸಿತು.

ಈ ವೇಳೆ ಪ್ರಕರಣದಲ್ಲಿ ವಾದ ಮಂಡಿಸಲು ಹಿರಿಯ ವಕೀಲ ಪ್ರೊ.ರವಿವರ್ಮಕುಮಾರ್ ನೇಮಕವಾಗಿದೆ. ಹೀಗಾಗಿ ವಾದ ಮಂಡಿಸಲ ಕಾಲಾವಕಾಶ ನೀಡಲು ಎಸ್‌.ಪಿ.ಪಿ ಅಶೋಕ್ ನಾಯಕ್ ಮನವಿ ಮಾಡಿದರು. ಈ ಮನವಿ ಮಾನ್ಯ ಮಾಡಿದ ಹೈಕೋರ್ಟ್ ವಿಚಾರಣೆಯನ್ನು ಸೆ.19ಕ್ಕೆ ಮುಂದೂಡಿದೆ.

ಅಲ್ಲದೆ, ಈ ಹಿಂದೆ ಯಡಿಯೂರಪ್ಪ ಬಂಧಿಸದಂತೆ ನೀಡಿದ್ದ ಮಧ್ಯಂತರ ಆದೇಶ ವಿಸ್ತರಿಸಿ ಹೈಕೋರ್ಟ್ ಆದೇಶಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News