ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ: ಸಿಐಡಿ ಪರ ವಾದಿಸಲು ವಕೀಲರ ನೇಮಕ

Update: 2024-06-12 16:21 GMT

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣದಲ್ಲಿ ಸಿಐಡಿ ಪರ ವಾದ ಮಂಡಿಸಲು ವಕೀಲ ಅಶೋಕ್ ನಾಯಕ್ ಅವರನ್ನು ನೇಮಿಸಿ ಸರಕಾರ ಆದೇಶಿಸಿದೆ.

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಯಡಿಯೂರಪ್ಪ ವಿರುದ್ದ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ಗಂಭೀರತೆ ಪರಿಗಣಿಸಿದ ಸರಕಾರ ಸಿಐಡಿ ತನಿಖೆಗೆ ವಹಿಸಿತ್ತು. ಇದೀಗ ಪ್ರಕರಣದಲ್ಲಿ ವಾದ ಮಂಡಿಸಲು ವಕೀಲ ಅಶೋಕ್ ನಾಯಕ್ ಅವರನ್ನು ನೇಮಿಸಿ ಸರಕಾರದ ಅಧೀನ ಕಾರ್ಯದರ್ಶಿ ಶ್ಯಾಮ್ ಹೊಳ್ಳ ಆದೇಶ ಮಾಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News