ಬೆಂಗಳೂರು: ಪ್ರಧಾನಿ ಮೋದಿಗೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಚೊಂಬು ಪ್ರದರ್ಶನ

Update: 2024-04-20 13:32 GMT

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ರಾಜ್ಯಕ್ಕೆ ʼಚೊಂಬುʼ ನೀಡಿದೆ ಎಂದು ಕರ್ನಾಟಕ ಕಾಂಗ್ರೆಸ್‌ ಮಾಡುತ್ತಿರುವ ಪ್ರಚಾರದ ನಡುವೆಯೇ, ಬೆಂಗಳೂರು ಅರಮನೆ ಮೈದಾನದಲ್ಲಿನ ಬಿಜೆಪಿ ಸಮಾವೇಶದಲ್ಲಿ ಪಾಲ್ಗೊಳ್ಳಲು ಪ್ರಧಾನಿ ಮೋದಿ ಅರಮನೆ ಮೈದಾನಕ್ಕೆ ತೆರಳುವಾಗ ರಸ್ತೆಗೆ ನುಗ್ಗಿ ಕಾಂಗ್ರೆಸ್ ಕಾರ್ಯಕರ್ತರು ಚೊಂಬು ಪ್ರದರ್ಶಿಸಿ ಪ್ರತಿಭಟಿಸಿದ್ದಾರೆ. 

ಮಹಮ್ಮದ್‌ ನಲಪಾಡ್‌ ನೇತೃತ್ವದ ಕಾಂಗ್ರೆಸ್‌ ಕಾರ್ಯಕರ್ತರ ತಂಡ ನಡುರಸ್ತೆಯಲ್ಲಿ ಚೊಂಬು ಪ್ರದರ್ಶಿಸಿದ್ದು, ತಕ್ಷಣವೇ ಅಧಿಕಾರಿಗಳು ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ.


Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News