ಹೊಸಬರಿಗೆ ಅವಕಾಶ ನೀಡಬೇಕೆಂದು ರಾಜಕೀಯ ನಿವೃತ್ತಿ ಘೋಷಣೆ: ಡಿ.ವಿ.ಸದಾನಂದಗೌಡ

Update: 2023-12-28 15:54 GMT

ಬೆಂಗಳೂರು: ‘ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವಂತೆ ಪಕ್ಷದ ರಾಜ್ಯ ನಾಯಕರು ಒತ್ತಡ ಹೇರುತ್ತಿದ್ದಾರೆ. ಆದರೆ ಹೊಸಬರಿಗೆ ಅವಕಾಶ ನೀಡಲು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಣೆ ಮಾಡಿದ್ದೇನೆ’ ಎಂದು ಕೇಂದ್ರದ ಮಾಜಿ ಸಚಿವ ಹಾಗೂ ಹಾಲಿ ಸಂಸದ ಡಿ.ವಿ. ಸದಾನಂದ ಗೌಡ ಹೇಳಿದ್ದಾರೆ.

ಗುರುವಾರ ಮಲ್ಲೇಶ್ವರದ ಬಿಜೆಪಿ ಕೇಂದ್ರ ಕಚೇರಿ ಜಗನ್ನಾಥ ಭವನದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಪ್ರತಿಪಕ್ಷ ನಾಯಕ ಆರ್.ಅಶೋಕ್ ನಿನ್ನೆ ನಮ್ಮ ಮನೆಗೆ ಬಂದಿದ್ದರು. ಬೆಂಗಳೂರು ಉತ್ತರದಿಂದ ಸ್ಪರ್ಧೆ ಮಾಡಬೇಕು, ನಿಮ್ಮ ಅವಶ್ಯಕತೆ ಇದೆ ಎಂದಿರುವುದು ನಿಜ. ಆದರೆ ಅವರಷ್ಟೇ ಅಲ್ಲ, ನಮ್ಮ ಎಲ್ಲ ಮಾಜಿ ಮಂತ್ರಿಗಳೂ, ಶಾಸಕರೂ ಎಲ್ಲರೂ ಪ್ರತಿನಿತ್ಯ ಕರೆ ಮಾಡಿ ಒತ್ತಡ ಹಾಕುತ್ತಿದ್ದಾರೆ ಎಂದು ತಿಳಿಸಿದರು.

ನನ್ನ ಮೇಲೆ ಅವರೆಲ್ಲ ಪ್ರೀತಿ ಇಟ್ಟುಕೊಂಡಿರುವುದು ಸಂತೋಷ ತಂದಿದೆ. ಆದರೆ ನನ್ನದೇ ಆದ ನಿರ್ಧಾರ ಮಾಡಿದ್ದೇನೆ. ಹೊಸಬರಿಗೆ ಅವಕಾಶ ಮಾಡಿಕೊಡಬೇಕೆಂಬ ಉದ್ದೇಶದಿಂದ ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದೇನೆ. ಆದರೆ, ಮುಂದೆ ಏನಾಗುತ್ತದೆ ಎಂದು ಕಾದು ನೋಡೋಣ ಎಂದು ಡಿ.ವಿ. ಸದಾನಂದಗೌಡ ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News