ಬಿಜೆಪಿಗೆ ರಾಜಕೀಯ ಮುಖ್ಯವೇ ಹೊರತು, ಅಭಿವೃದ್ಧಿಯಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

Update: 2023-12-15 09:49 GMT

ಬೆಳಗಾವಿ: ‘ಬಿಜೆಪಿ ನಾಯಕರಿಗೆ ರಾಜಕಾರಣ ಮುಖ್ಯವೇ ಹೊರತು ರಾಜ್ಯದ ಅಭಿವೃದ್ಧಿ, ಜನರ ಸಮಸ್ಯೆಯಾಗಲಿ ಅಲ್ಲ. ಅವರಿಗೆ ಜನರ ಸಮಸ್ಯೆ ಬಗ್ಗೆ ಆಸಕ್ತಿ ಇಲ್ಲವೆಂದರೆ ನಾವೇನು ಮಾಡಲು ಸಾಧ್ಯ’ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರಶ್ನಿಸಿದ್ದಾರೆ.

ಶುಕ್ರವಾರ ಸುವರ್ಣಸೌಧದ ಆವರಣದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ‘ಬಿಜೆಪಿ ಹಾಗೂ ಜೆಡಿಎಸ್‍ನವರಿಗೆ ಜನರ ಸಮಸ್ಯೆ ಬಗ್ಗೆ ಎಷ್ಟು ಕಾಳಜಿ ಇದೆ ಎಂಬುದು ಮುಖ್ಯ. ಆದರೆ ಬಿಜೆಪಿಯವರಿಗೆ ಈ ಬಗ್ಗೆ ಚರ್ಚೆ ಮಾಡಲು ಆಸಕ್ತಿ ಇಲ್ಲದಿದ್ದರೆ ನಾವೇನು ಮಾಡಲು ಸಾಧ್ಯ? ಬಿಜೆಪಿಗೆ ಕೇವಲ ರಾಜಕಾರಣ ಬೇಕು. ಅವರು ರಾಜಕಾರಣ ಮಾಡಿಕೊಂಡಿರಲಿ, ನಾವು ರಾಜ್ಯದ ಅಭಿವೃದ್ಧಿಯತ್ತ ಗಮನ ಹರಿಸುತ್ತೇವೆ ಎಂದು ವಾಗ್ದಾಳಿ ನಡೆಸಿದರು.

‘ಮದುವೆ, ಶುಭ ಸಮಾರಂಭ, ಭೋಜನಕೂಟದಲ್ಲಿ ನಾಯಕರು ಪಕ್ಷಾತೀತ ಹಾಗೂ ಜಾತ್ಯತೀತವಾಗಿ ಸೇರುತ್ತಾರೆ. ಅದರಲ್ಲಿ ತಪ್ಪೇನಿದೆ? ಬಿಜೆಪಿಯವರು ನನ್ನ ಜೊತೆ ಮಾತನಾಡುವುದು, ನಮ್ಮ ಪಕ್ಷದ ನಾಯಕರು ಅವರ ಜೊತೆ ಮಾತನಾಡುವುದು ಸಹಜ. ರಾಜಕೀಯವಾಗಿ ಏನೇ ಭಿನ್ನಾಭಿಪ್ರಾಯವಿದ್ದರೂ ಮನುಷ್ಯರ ನಡುವಣ ಬಾಂಧವ್ಯ ಮುಖ್ಯವಾದದ್ದು ಎಂದು ಅವರು, ಔತಣಕೂಟಕ್ಕೆ ಬಿಜೆಪಿ ಸದಸ್ಯರ ಭಾಗಿಯಾದ ಬಗ್ಗೆ ಸ್ಪಷ್ಟಣೆ ನೀಡಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News