ನಾಳೆ(ಎ.20) ಪ್ರಧಾನಿ ಮೋದಿ ಬೆಂಗಳೂರಿಗೆ ಭೇಟಿ

Update: 2024-04-19 16:47 GMT

ಬೆಂಗಳೂರು: ಬೆಂಗಳೂರಿನ ವಿವಿಧ ಲೋಕಸಭಾ ಕ್ಷೇತ್ರಗಳು, ಗ್ರಾಮಾಂತರ ಕ್ಷೇತ್ರವು ಸೇರಿ ಪ್ರಧಾನಿ ಮೋದಿ ಅವರ ಕಾರ್ಯಕ್ರಮ ನಾಳೆ(ಎ.20) ಸಂಜೆ 4ಗಂಟೆಗೆ ನಗರದ ಅರಮನೆ ಮೈದಾನದಲ್ಲಿ ನಡೆಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.

ಶುಕ್ರವಾರ ನಗರದಲ್ಲಿ ಮಾತನಾಡಿದ ಅವರು, ಇಲ್ಲಿನ ಅರಮನೆ ಮೈದಾನದ ಗಾಯತ್ರಿ ವಿಹಾರ ಗೇಟ್ ನಂ.4ರಲ್ಲಿ ನಡೆಯಲಿರುವ ಪ್ರಧಾನಿ ಮೋದಿ ಅವರ ಸಾರ್ವಜನಿಕ ಸಭೆ ನಡೆಯಲಿದ್ದು, 60 ಸಾವಿರಕ್ಕೂ ಹೆಚ್ಚು ಆಸನಗಳ ವ್ಯವಸ್ಥೆ ಮಾಡಲಾಗಿದೆ. ಕಾರ್ಯಕರ್ತರು ಮತ್ತು ಮತದಾರರ ಉತ್ಸಾಹ ಇಮ್ಮಡಿಯಾಗಲಿದೆ. 15 ಸಾವಿರ ವಿಶೇಷ ಆಹ್ವಾನಿತರಿಗೆ ಪಾಸ್ ವ್ಯವಸ್ಥೆ ಮಾಡಿದ್ದೇವೆ ಎಂದರು.

ಹತ್ಯೆ ಮಾಡುವವರಿಗೆ ರಕ್ಷಣೆಯ ಗ್ಯಾರಂಟಿ: ಗ್ಯಾರಂಟಿಯ ಭರಾಟೆಯಲ್ಲಿ ದೇಶದ್ರೋಹಿಗಳಿಗೆ, ದರೋಡೆಕೋರರಿಗೆ, ಬರ್ಬರ ಹತ್ಯೆ ಮಾಡುವವರಿಗೂ ರಕ್ಷಣೆ ಕೊಡುವ ಗ್ಯಾರಂಟಿಯನ್ನು ಕೊಡುವಂತೆ ಕಾಣುತ್ತಿದೆ. ಇದನ್ನು ಹಗುರವಾಗಿ ತೆಗೆದುಕೊಳ್ಳುವ ವಿಚಾರವಲ್ಲ. ನಿನ್ನೆ ಒಂದೇ ದಿನದಲ್ಲಿ 8 ಹತ್ಯೆ ಪ್ರಕರಣಗಳು ನಡೆದಿವೆ. ಮಡಿಕೇರಿಯಲ್ಲಿ ಬಿಜೆಪಿ ಕಾರ್ಯಕರ್ತನ ಮೇಲೆ ಕಾರು ಹಾಯಿಸಿದ್ದು, ಒಬ್ಬರ ಹತ್ಯೆಯಾಗಿದೆ. ಧಾರವಾಡದ ಘಟನೆ, ಗದಗದ ಘಟನೆ ಇದಕ್ಕೆ ಉದಾಹರಣೆ ಎಂದು ಬಿ.ವೈ.ವಿಜಯೇಂದ್ರ ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News