ಕರ ಸೇವಕರ ಬಂಧನ ಖಂಡಿಸಿ ನಾಳೆ(ಜ.3) ಬಿಜೆಪಿಯಿಂದ ಪ್ರತಿಭಟನೆ

Update: 2024-01-02 14:18 GMT

ಬೆಂಗಳೂರು: ಹುಬ್ಬಳ್ಳಿಯಲ್ಲಿ ಕರಸೇವಕರ ಬಂಧನ ಖಂಡಿಸಿ ನಾಳೆ(ಜ.3) ರಾಜ್ಯ ಸರಕಾರದ ವಿರುದ್ಧ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.

ಮಂಗಳವಾರ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿಯಲ್ಲಿ 31 ವರ್ಷದ ಹಳೆಯ ಪ್ರಕರಣದಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತ ಶ್ರೀಕಾಂತ ಪೂಜಾರಿ ಎಂಬುವರನ್ನು ಬಂಧಿಸಲಾಗಿದೆ. ಇದು ಖಂಡನೀಯವಾಗಿದೆ. ಈ ನಿಟ್ಟಿನಲ್ಲಿ ಸರಕಾರದ ವಿರುದ್ಧ ಬುಧವಾರ ಇಡೀ ರಾಜ್ಯಾದ್ಯಂತ ಹೋರಾಟ ಮಾಡಲು ಕರೆ ನೀಡುತ್ತಿದ್ದೇವೆ ಎಂದರು.

ಪ್ರತಿಭಟನೆ ಭಾಗವಾಗಿ ಬೆಂಗಳೂರಿನ ಫ್ರೀಡಂ ಪಾರ್ಕ್ ಮಾತ್ರವಲ್ಲದೆ, ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ ನಡೆಸುತ್ತೇವೆ ಎಂದರು. 

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News