ಬೆಂಗಳೂರಿನ ಎಲ್ಲ ಪೊಲೀಸ್‌ ಠಾಣೆಗಳಲ್ಲಿ ಕ್ಯೂಆರ್‌ ಕೋಡ್‌ ಆಧಾರಿತ ಅಭಿಪ್ರಾಯ ಸಂಗ್ರಹಣೆಯ ವ್ಯವಸ್ಥೆ ಜಾರಿ

Update: 2023-07-11 09:05 GMT

ಬೆಂಗಳೂರು:  ಕ್ಯೂಆರ್‌ ಕೋಡ್ ಆಧಾರಿತ ಸಾರ್ವಜನಿಕ ಅಭಿಪ್ರಾಯ ಸಂಗ್ರಹಣೆಯ ವ್ಯವಸ್ಥೆಯನ್ನು ನಗರದ ಎಲ್ಲ ಪೊಲೀಸ್ ಠಾಣೆಗಳಲ್ಲಿ ಅಳವಡಿಸಲಾಗಿದ್ದು, ಇದಕ್ಕೆ ‘ಲೋಕ ಸ್ಪಂದನ’ ಎಂದು ಹೆಸರಿಸಲಾಗಿದೆ. 

ಈ ಸಂಬಂಧ ಟ್ವೀಟ್ ಮಾಡಿರುವ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ, ''QR ಕೋಡ್ ಆಧಾರಿತ ಸಾರ್ವಜನಿಕ ಅಭಿಪ್ರಾಯ ಸಂಗ್ರಹಣೆಯ ವ್ಯವಸ್ಥೆಯನ್ನು ನಗರದ ಎಲ್ಲ ಪೊಲೀಸ್ ಠಾಣೆಗಳಲ್ಲಿ ಅಳವಡಿಸಲಾಗಿದೆ. ಸಾರ್ವಜನಿಕರು ಈ ಮೂಲಕ ನಮ್ಮ ಸೇವೆಯ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಮುಕ್ತವಾಗಿ ಮತ್ತು ಸರಳವಾಗಿ ತಂತ್ರಜ್ಞಾನ ಉಪಯೋಗಿಸಿ ನೀಡಬಹುದಾಗಿದೆ. ಇದರಿಂದ ನಾವು ಪೊಲೀಸ್ ವ್ಯವಸ್ಥೆಯನ್ನು ಇನ್ನೂ ಉತ್ತಮಪಡಿಸಲು ಸಹಾಯವಾಗಲಿದೆ'' ಎಂದು ತಿಳಿಸಿದ್ದಾರೆ. 

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News