ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆಗೆ ಆಗ್ರಹಿಸಿ ದಿಲ್ಲಿಯಲ್ಲಿ ಧರಣಿ

Update: 2024-08-07 15:49 GMT

ಬೆಂಗಳೂರು : ರಾಯಚೂರಿನಲ್ಲಿ ಏಮ್ಸ್ ಸ್ಥಾಪಿಸಲು ಕೇಂದ್ರ ಸರಕಾರವನ್ನು ಒತ್ತಾಯಿಸಿ ಹೊಸದಿಲ್ಲಿಯ ಜಂತರ್‌ ಮಂತರ್‌ನಲ್ಲಿ ಬುಧವಾರ ರಾಯಚೂರು ಜಿಲ್ಲಾ ಏಮ್ಸ್ ಹೋರಾಟ ಸಮಿತಿಯ ಮುಖ್ಯ ಸಂಚಾಲಕ ಡಾ.ಬಸವರಾಜ ಕಳಸದ, ಸಂಸದರಾದ ಕುಮಾರ್ ನಾಯಕ್, ಡಾ.ಪ್ರಭಾ ಮಲ್ಲಿಕಾರ್ಜುನ್, ಡಾ.ರಾಧಾಕೃಷ್ಣ ಹಾಗೂ ರಾಘವೇಂದ್ರ ಹಿಟ್ನಾಳ್ ಧರಣಿ ನಡೆಸಿದರು.

ಈ ಸಂದರ್ಭದಲ್ಲಿ ರಾಯಚೂರು ಜಿಲ್ಲ ಏಮ್ಸ್ ಹೋರಾಟ ಸಮಿತಿಯ ಸದಸ್ಯರಾದ ಅಶೋಕ್ ಕುಮಾರ್ ಜೈನ್, ಅಮರೇಗೌಡ ಪಾಟೀಲ್, ಥಾಮಸ್ ಬೆಂಜಮಿನ್ ಮತ್ತು ವಿನಯ್ ಕುಮಾರ್ ಚಿತ್ರಗಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News