ರಾಮಮಂದಿರ ಉದ್ಘಾಟನೆ: ಜ.22ಕ್ಕೆ ರಜೆ ಘೋಷಿಸಲು ಬಿಜೆಪಿ ಆಗ್ರಹ

Update: 2024-01-19 13:05 GMT

ಬೆಂಗಳೂರು: ಅಯೋಧ್ಯೆಯಲ್ಲಿನ ರಾಮಮಂದಿರದಲ್ಲಿ ಶ್ರೀರಾಮಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಾರ್ಯವನ್ನು ವೀಕ್ಷಿಸಲು ಅವಕಾಶ ಆಗುವಂತೆ ಜ.22ರಂದು ರಾಜ್ಯ ಸರಕಾರವು ರಜೆ ಘೋಷಿಸಬೇಕು ಎಂದು ಬಿಜೆಪಿ ಆಗ್ರಹಿಸಿದೆ.

ಶುಕ್ರವಾರ ಈ ಸಂಬಂಧ ಮುಖ್ಯಮಂತ್ರಿಗೆ ಪತ್ರ ಬರೆದಿರುವ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ, ‘ಜ.22ರಂದು ಸರಕಾರಿ ರಜೆ ಘೋಷಿಸಬೇಕು’ ಎಂದು ಮನವಿ ಮಾಡಿದ್ದಾರೆ. ಈ ಮಧ್ಯೆ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ‘ಈಗಾಗಲೇ ಕೇಂದ್ರ ಸರಕಾರವೂ ಜ.22ಕ್ಕೆ ಅರ್ಧದಿನ ರಜೆ ಘೋಷಿಸಿದೆ. ರಾಜ್ಯ ಸರಕಾರವೂ ಅಂದು ರಜೆ ಪ್ರಕಟಿಸಬೇಕು ಎಂದು ಒತ್ತಾಯಿಸಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News