ಅತ್ಯಾಚಾರ ಆರೋಪ ಪ್ರಕರಣ : ಶಾಸಕ ಮುನಿರತ್ನ 12 ದಿನ ಎಸ್‌ಐಟಿ ವಶಕ್ಕೆ

Update: 2024-09-24 14:04 GMT

ಶಾಸಕ ಮುನಿರತ್ನ

ಬೆಂಗಳೂರು : ಅತ್ಯಾಚಾರ ಆರೋಪ ಪ್ರಕರಣದಡಿ ನ್ಯಾಯಾಂಗ ಬಂಧನದಲ್ಲಿರುವ ಆರ್.ಆರ್.ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು 12 ದಿನಗಳ ಕಾಲ ವಿಶೇಷ ತನಿಖಾ ತಂಡ(ಎಸ್‌ಐಟಿ)ದ ವಶಕ್ಕೆ ನೀಡಿ ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಂಗಳವಾರ ಆದೇಶ ಹೊರಡಿಸಿದೆ.

ಶಾಸಕ ಮುನಿರತ್ನ ಅವರ ಹೆಚ್ಚಿನ ವಿಚಾರಣೆಗಾಗಿ ಅ.5ರವರೆಗೆ ಪೊಲೀಸ್ ವಶಕ್ಕೆ ನ್ಯಾಯಾಲಯ ಅನುಮತಿ ನೀಡಿದ ಬೆನ್ನಲ್ಲೇ ಎಸ್‌ಐಟಿ ಅಧಿಕಾರಿಗಳು ಪರಪ್ಪನ ಅಗ್ರಹಾರ ಜೈಲಿಗೆ ದೌಡಾಯಿಸಿ ಮುನಿರತ್ನ ಅವರನ್ನು ವಶಕ್ಕೆ ಪಡೆಯಲು ಮುಂದಾದರು.

ಶಾಸಕ ಮುನಿರತ್ನ ವಿರುದ್ಧ ನಗರದ ವೈಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಜೀವ ಬೆದರಿಕೆ ಹಾಗೂ ಜಾತಿ ನಿಂದನೆ, ಲಂಚಕ್ಕೆ ಬೇಡಿಕೆ ಹಾಗೂ ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣಗಳ ಸಮಗ್ರ ತನಿಖೆ ನಡೆಸುವಂತೆ ಸರಕಾರವು ಇತ್ತೀಚೆಗೆ ಎಸ್‌ಐಟಿ ರಚಿಸಿ ಆದೇಶಿಸಿತ್ತು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News