ಅತ್ಯಾಚಾರ ಪ್ರಕರಣ | ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ : ತೀರ್ಪು ಕಾಯ್ದಿರಿಸಿದ ಹೈಕೋರ್ಟ್

Update: 2024-09-26 10:01 GMT

 ಪ್ರಜ್ವಲ್ ರೇವಣ್ಣ

ಬೆಂಗಳೂರು : ಮೈಸೂರಿನ ಕೆ.ಆರ್.ನಗರ ಮಹಿಳೆಯ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ಪೂರ್ಣಗೊಳಿಸಿದ ಹೈಕೋರ್ಟ್ ಆದೇಶ ಕಾಯ್ದಿರಿಸಿದೆ.

ವಿಚಾರಣೆಯ ವೇಳೆ, "ಘಟನೆ ಭೀಕರವಾಗಿದೆ‌. ಚಾರ್ಚ್ ಶೀಟ್ ನೋಡಿದರೆ ಹೀನಾಯವಾಗಿದೆ" ಎಂದು ಹೈಕೋರ್ಟ್ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಪೀಠ ಅಭಿಪ್ರಾಯ ವ್ಯಕ್ತಪಡಿಸಿದೆ‌.

ಸಂತ್ರಸ್ತೆ ಪರ ಪ್ರೊ.ರವಿವರ್ಮ ಕುಮಾರ್ ವಾದ ಮಂಡಸಿದ್ದರು. ವಾದ ಪ್ರತಿವಾದ ಆಲಿಸಿದ ಹೈಕೋರ್ಟ್‌ ಪೀಠವು ತೀರ್ಪನ್ನು ಕಾಯ್ದಿರಿಸಿದೆ‌.

Full View

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News