ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರು ತನಿಖೆ ಕುರಿತು ಚಿಂತನೆ ನಡೆಸಿಲ್ಲ: ಗೃಹ ಸಚಿವ ಪರಮೇಶ್ವರ್

Update: 2023-08-28 13:52 GMT

ಬೆಂಗಳೂರು, ಆ.28:ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರು ತನಿಖೆ ಕುರಿತು ಸದ್ಯಕ್ಕೆ ಚಿಂತನೆ ನಡೆಸಿಲ್ಲ. ಆದರೆ, ಈ ಸಂಬಂಧ ನ್ಯಾಯಾಲಯ ಆದೇಶದ ನಂತರ ತೀರ್ಮಾನ ಕೈಗೊಳ್ಳಲಾಗುವುದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

ಸೋಮವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ ಸಂಬಂಧ ಪರ, ವಿರೋಧದ ಪ್ರತಿಭಟನೆಗಳು ನಡೆಯುತ್ತಿವೆ. ಮರುತನಿಖೆ ನಡೆಸುವಂತೆ ಒತ್ತಾಯ ಮಾಡುತ್ತಿದ್ದಾರೆ. ನಾವು ಕೂಡ ಇದನ್ನು ಗಮನಿಸುತ್ತಿದ್ದೇವೆ. ಆದರೆ, ಈ ಪ್ರಕರಣ ನ್ಯಾಯಾಲಯದಲ್ಲಿದ್ದು, ಅಲ್ಲಿ ಏನು ಆದೇಶ ಬರಲಿದೆಯೋ ನೋಡಬೇಕಾಗಿದೆ. ಅಲ್ಲಿಯವರೆಗೂ ಯಾವುದೇ ತೀರ್ಮಾನ ಕೈಗೊಳ್ಳುವುದಿಲ್ಲ ಎಂದರು.

ಇನ್ನೂ, ತುಮಕೂರಿನಲ್ಲಿ ಬಹಳ ಜನರು ಬಿಜೆಪಿ, ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರಲಿದ್ದಾರೆ ಎಂಬ ಬಗ್ಗೆ ಚರ್ಚೆಯಾಗುತ್ತಿದೆ.ಆದರೆ, ಅಲ್ಲಿ ನಮ್ಮ ಕಾರ್ಯಕರ್ತರು ಕೂಡ ಇರಲಿದ್ದು, ಅವರೊಂದಿಗೆ ಚರ್ಚಿಸಿ ಅಧ್ಯಕ್ಷರು ತೀರ್ಮಾನ ಮಾಡುತ್ತಾರೆ. ನನ್ನ ಜೊತೆ ಯಾರೂ ಈ ಬಗ್ಗೆ ಮಾತನಾಡಿಲ್ಲ ಎಂದು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News