ರಾಜಕಾರಣ ಬಿಡೋದಕ್ಕೂ ಸಿದ್ಧ, ಆದರೆ ಸ್ವಾಭಿಮಾನ, ಸಿದ್ಧಾಂತ ಬಿಡಲ್ಲ: ಸಂಸದೆ ಸುಮಲತಾ ಅಂಬರೀಶ್

Update: 2023-11-03 09:02 GMT

ಮಂಡ್ಯ , ನ.3: ʼʼನಾನು ಮಂಡ್ಯ ಸೊಸೆ,ಯಾವತ್ತೂ ಮಂಡ್ಯ ಬಿಡಲ್ಲ. ಮುಂದೊಮ್ಮೆ ರಾಜಕಾರಣ ಬಿಡಬಹುದು ಆದರೆ ಸ್ವಾಭಿಮಾನ, ಸಿದ್ಧಾಂತ ಬಿಡಲ್ಲʼʼ ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಹೇಳಿದರು.

ಶುಕ್ರವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,ʼʼ ಅಂಬರೀಶ್ ಕುಟುಂಬಕ್ಕೆ ಮಂಡ್ಯ ಜನರು ಸಾಕಷ್ಟು ಪ್ರೀತಿ ಕೊಟ್ಟು ಹರಸಿದ್ದಾರೆ, ಬೆಳೆಸಿದ್ದಾರೆ. ಹೀಗಾಗಿ ನಾನೇಕೆ  ಮಂಡ್ಯ ಬಿಟ್ಟು ಹೋಗಬೇಕು? ಮಂಡ್ಯ ಬಿಟ್ಟು ಬೇರೆಲ್ಲೂ ಹೋಗುವುದಿಲ್ಲʼʼ ಎಂದು ಸ್ಪಷ್ಟಪಡಿಸಿದರು. 

ಜೆಡಿಎಸ್- ಬಿಜೆಪಿ ಮೈತ್ರಿ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ʼʼಜೆಡಿಎಸ್‌ ಬಿಜೆಪಿ ಮೈತ್ರಿ ಆಗಿದೆ ಆದರೆ ಕ್ಷೇತ್ರ ಹಂಚಿಕೆ ಇನ್ನೂ ಆಗಿಲ್ಲ. ಈಗ ಎದ್ದಿರುವ ಊಹಾಪೋಹಗಳಿಗೆ ಪ್ರತಿಕ್ರಿಯೆ ಕೊಡಲ್ಲ. ಈ ವಿಚಾರದಲ್ಲಿ ನಾನು ದುಡುಕಿನ ನಿರ್ಧಾರ ಮಾಡಲ್ಲ. ಮಂಡ್ಯ ಜನ ನನ್ನ ಜೊತೆ ಇದ್ದಾರೆ, ನನಗೆ ಆ ವಿಶ್ವಾಸ ಇದೆ. ಈ ಕ್ಷೇತ್ರ ಬೇಕು, ಆ ಕ್ಷೇತ್ರ ಬೇಕು ಎಂದು ಯಾವ ಪಕ್ಷವನ್ನೂ ಕೇಳಿಲ್ಲ. ನನ್ನ ರಾಜಕೀಯ ಭವಿಷ್ಯದ ಬಗ್ಗೆ ನನಗೆ ಯೋಚನೆ ಇಲ್ಲʼʼ ಎಂದರು. 

ʼʼಸಿಎಂ ಬದಲಾವಣೆ ಮಾಡುವುದು ಕಾಂಗ್ರೆಸ್‌ ಪಕ್ಷದ ಆಂತರಿಕ ವಿಚಾರ. ಈ ಬಗ್ಗೆ ನಾನು ಮಾತನಾಡಲ್ಲʼʼ ಎಂದು ಇದೇ ವೇಳೆ  ಪ್ರಶ್ನೆಯೊಂದಕ್ಕೆ ಉತ್ತರಿಸಿದರು. 

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News