ರೇಣುಕಾಸ್ವಾಮಿ ಹತ್ಯೆ ಪ್ರಕರಣ | ಮೂವರು ಆರೋಪಿಗಳಿಗೆ ಜಾಮೀನು
Update: 2024-09-23 11:42 GMT
ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಮೂವರು ಆರೋಪಿಗಳಿಗೆ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ.
ಆ ಮೂಲಕ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಮೂವರು ಆರೋಪಿಗಳಿಗೆ ಜಾಮೀನು ಸಿಕ್ಕಂತಾಗಿದೆ. ಜಾಮೀನು ಕೋರಿ ಎ16 ಕೇಶವ್ ಮೂರ್ತಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯ ಪೀಠವು ಒಬ್ಬರ ಶ್ಯೂರಿಟಿ, ತನಿಖೆ ಸಹಕರಿಸಲು ಸೂಚಿಸಿ ಜಾಮೀನು ನೀಡಿದೆ. ಅರ್ಜಿದಾರ ಕೇಶವ್ ಮೂರ್ತಿ ಪರ ವಕೀಲ ರಂಗನಾಥ್ ರಡ್ಡಿ ವಾದ ಮಂಡಿಸಿದರು. ವಾದ ಆಲಿಸಿದ ಹೈಕೋರ್ಟ್ ಜಾಮೀನು ನೀಡಿ ಆದೇಶಿದೆ.
ಇದೇ ವೇಳೆ ಪ್ರಕರಣದ ಎ17 ನಿಖಿಲ್ ನಾಯ್ಕ್ , ಎ15 ಕಾರ್ತಿಕ್ಗೆ ಕೂಡಾ ಜಾಮೀನು ಮಂಜೂರು ಆಗಿದೆ. ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ 57 ಸಿಸಿಎಚ್ ನ್ಯಾಯಾಲಯವು ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಆದೇಶಿದೆ.