ತನ್ನ ವಿರುದ್ಧ ಆಧಾರ ರಹಿತ ಸುದ್ದಿ ಪ್ರಸಾರ ಮಾಡದಂತೆ ಮಾಧ್ಯಮಗಳ ವಿರುದ್ಧ ನಿರ್ಬಂಧಕಾಜ್ಞೆ ಕೋರಿ ಬಸವರಾಜ ಬೊಮ್ಮಾಯಿ ಅರ್ಜಿ

Update: 2024-08-27 14:48 GMT

ಬೆಂಗಳೂರು: ತನ್ನ ವಿರುದ್ಧ ಯಾವುದೇ ಆಧಾರ ರಹಿತ ಸುದ್ದಿ ಪ್ರಸಾರ ಮಾಡದಂತೆ ಮಾಧ್ಯಮಗಳ ವಿರುದ್ಧ ನಿರ್ಬಂಧಕಾಜ್ಞೆ ಕೋರಿ ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಅರ್ಜಿ ಸಲ್ಲಿಸಿದ್ದಾರೆ.

ನಗರದ ಸಿವಿಲ್ ಕೋರ್ಟ್ ಮೆಟ್ಟಿಲೇರಿರುವ ಬಸವರಾಜ ಬೊಮ್ಮಾಯಿ, ವಕೀಲ ಜಗದೀಶ್ ಮಹದೇವ್ ವಿರುದ್ದವೂ ನಿರ್ಬಂಧಕಾಜ್ಞೆ ಕೋರಲಾಗಿದೆ.

ಅರ್ಜಿಯಲ್ಲಿ ತಮ್ಮ ವಿರುದ್ಧ ಮಾನಹಾನಿಕರ ಹೇಳಿಕೆ ಸುದ್ದಿ ಪ್ರಸಾರ ಮಾಡದಂತೆ ದಾವೆ ಹೂಡಲಾಗಿದ್ದು, ಅರ್ಜಿ ಸಂಬಂಧ‌ ಆಗಸ್ಟ್‌ 28ಕ್ಕೆ ಆದೇಶ ಪ್ರಕಟಿಸಲಿದೆ‌.

Tags:    

Writer - ವಾರ್ತಾಭಾರತಿ

contributor

Editor - Ashfaq

contributor

Byline - ವಾರ್ತಾಭಾರತಿ

contributor

Similar News