ರಸ್ತೆ ಅಪಘಾತ; ಕೇರಳ ಮೂಲದ ಇಬ್ಬರು ಯುವಕರು ಮೃತ್ಯು

Update: 2023-09-07 14:52 GMT

ದಾವಣಗೆರ: ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ಯುವಕರು ಮೃತಪಟ್ಟಿರುವ ಘಟನೆ ಇಲ್ಲಿನ ರಾಷ್ಟ್ರೀಯ 48 ಹೆದ್ದಾರಿಯಲ್ಲಿ ಗುರುವಾರ ಮುಂಜಾನೆ ವರದಿಯಾಗಿದೆ.

ಕೇರಳ ಮೂಲದ ಅತುಲ್(25), ಋಷಿಕೇಶ್ ( 24) ಮೃತ ಯುವಕರು ಎಂದು ಗುರುತಿಸಲಾಗಿದೆ. ಈ ಯುವಕರು ಹುಬ್ಬಳ್ಳಿಯಿಂದ ಬೆಂಗಳೂರಿಗೆ ಬೈಕಿನಲ್ಲಿ ಹೊರಟಿದ್ದರು ಎನ್ನಲಾಗಿದೆ. ನಗರದ ಎಸ್.ಎಸ್. ಆಸ್ಪತ್ರೆ ಪಕ್ಕದಲ್ಲಿರುವ ರೈಲ್ವೆ ಬ್ರಿಡ್ಜ್ ಬಳಿ ಈ ಅಪಘಾತ ಸಂಭವಿಸಿದೆ

ಯುವಕರು ಹೋಗುತ್ತಿದ್ದ ಬೈಕ್ ನ ನಿಯಂತ್ರಣ ತಪ್ಪಿ ರಸ್ತೆಯ ತಡೆಗೋಡೆಗೆ ಢಿಕ್ಕಿ ಹೊಡೆದಿದೆ. ಇದರ ಪರಿಣಾಮ ಸೇತಿವೆ ಮೇಲಿಂದ ರೈಲ್ವೆ ಹಳಿ ಪಕ್ಕದಲ್ಲಿ ಬಿದ್ದು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.

ಇದೇ ವೇಳೆ ರಸ್ತೆಯ ಮಧ್ಯೆದಲ್ಲಿ ಬಿದ್ದ ಬೈಕ್‍ಗೆ ಕಾರು ಡಿಕ್ಕಿ ಹೊಡೆದಿದ್ದು, ಕಾರು ಚಾಲಕನಿಗೆ ಸಣ್ಣಪುಟ್ಟಗಾಯಗಳಾಗಿ ಆಸ್ಪತ್ರೆಗೆ ದಾಖಲಿಸಲಾದೆ. ಸ್ಥಳಕ್ಕೆ ಎಸ್ ಪಿ ಉಮಾ ಪ್ರಶಾಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ದಾವಣಗೆರೆ ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News