ಸಾಗರ: ಕಾಲುಜಾರಿ ಕೆರೆಗೆ ಬಿದ್ದು ರೈತ ಮೃತ್ಯು

Update: 2023-09-19 09:39 GMT

ಸಾಗರ:  ಕಾಲುಜಾರಿ ಕೆರೆಗೆ ಬಿದ್ದು ರೈತರೊಬ್ಬರು ಮೃತಪಟ್ಟ ಘಟನೆ ತಾಲ್ಲೂಕಿನ ಆನಂದಪುರಂ ತಾವರೆಹಳ್ಳಿಯಲ್ಲಿ ಸೋಮವಾರ ನಡೆದಿದೆ.

ಮೃತ ರೈತನನ್ನು ಸತೀಶ್ ಗೌಡ (51) ಎಂದು ಗುರುತಿಸಲಾಗಿದೆ. ತಮ್ಮ ಮಗನ ಜೊತೆ ಎಮ್ಮೆಯನ್ನು ಹುಡುಕಿಕೊಂಡು ಕೆರೆಯ ದಂಡೆಯ ಮೇಲೆ ಬರುತ್ತಿದ್ದಾಗ ಆಕಸ್ಮಿಕವಾಗಿ ಕಾಲುಜಾರಿ ನೀರಿಗೆ ಬಿದ್ದಿದ್ದಾರೆ. ತಕ್ಷಣವೇ ಸ್ಥಳೀಯರು ಕೆರೆಯಲ್ಲಿ ಮುಳುಗಿದ್ದ ಸತೀಶ್ ಗೌಡ ಅವರನ್ನು ಮೇಲೆತ್ತಿ ಆನಂದಪುರಂ ಸರ್ಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಅವರು ಮೃತಪಟ್ಟಿದ್ದಾರೆ.

ಈ ಸಂಬಂಧ ಮಗ ಚೇತನ್ ಅವರ ಹೇಳಿಕೆಯನ್ನಾಧರಿಸಿ ಆನಂದಪುರಂ ಪೊಲೀಸರು ದೂರು ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News