ಹಿರಿಯ ಪತ್ರಕರ್ತ ಆರ್.ಜಯಕುಮಾರ್ ನಿಧನ

Update: 2024-05-25 10:00 GMT

ಬೆಂಗಳೂರು: ಹಿರಿಯ ಪತ್ರಕರ್ತ ಆರ್.ಜಯಕುಮಾರ್ (64)ಅವರು ಅನಾರೋಗ್ಯದಿಂದ ಶನಿವಾರ ಮಧ್ಯಾಹ್ನ ಮೃತಪಟ್ಟಿದ್ದಾರೆ.

ಕೊಡಗಿನವರಾದ ಜಯಕುಮಾರ್, ಚಳವಳಿ ಮೂಲಕವೇ ಪತ್ರಕರ್ತರಾಗಿ ರೂಪುಗೊಂಡವರು. ಸಂಯುಕ್ತ ಕರ್ನಾಟಕ, ವಿಜಯ ಕರ್ನಾಟಕ ಪತ್ರಿಕೆ, ಉದಯ ಟಿವಿ ಸೇರಿದಂತೆ ಹಲವಾರು ಪತ್ರಿಕೆಗಳಲ್ಲಿ ರಾಜ್ಯದ ನಾನಾ ಭಾಗದಲ್ಲಿ ಮೂರು ದಶಕಗಳಿಗೂ ಹೆಚ್ಚು ಕಾಲ ವೃತ್ತಿ ಮಾಡಿದ್ದರು.

ಜನಪರ ಹೋರಾಟದಲ್ಲಿ ಭಾಗವಹಿಸಿದ್ದ ಕಾಮ್ರೆಡ್ ಜಯಕುಮಾರ್ ಅವರು ಇತ್ತೀಚೆಗೆ ʼಗಾಂಧಿ ಮರೆತ ನಾಡಿನಲ್ಲಿʼ ಮತ್ತು ʼಕಾಡು ಹಾದಿಯ ಬೆಳಕಿನ ಜಾಡಿನಲ್ಲಿʼ ಎಂಬ ಎರಡು ಪುಸ್ತಕಗಳನ್ನು ಹೊರತಂದಿದ್ದರು.

ಜಯಕುಮಾರ್ ಅವರು ಪತ್ನಿ ಡಾ.ಲೀಲಾ ಸಂಪಿಗೆ, ಪುತ್ರಿ ದೀಪಿಕಾ, ಸೇರಿದಂತೆ ಅಪಾರ ಬಂಧುಗಳನ್ನು ಅಗಲಿದ್ದಾರೆ.

ಇಂದು ಸಂಜೆ ಅವರ ಮೃತದೇಹವನ್ನು ಬೆಂಗಳೂರು ಮೆಡಿಕಲ್ ಕಾಲೇಜಿಗೆ ದಾನ ಮಾಡಲಾಗುವುದು ಎಂದು ಅವರ ಕುಟುಂಬದ ಮೂಲಗಳು ತಿಳಿಸಿದೆ.

ಕೆಯುಡಬ್ಲೂಜೆ ಸಂತಾಪ:

ಹಿರಿಯ ಮತ್ತು ಕ್ರಿಯಾಶೀಲ ಪತ್ರಕರ್ತರಾಗಿದ್ದ ಆರ್.ಜಯಕುಮಾರ್ ಅವರ ನಿಧನಕ್ಕೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ಸಂತಾಪ ವ್ಯಕ್ತಪಡಿಸಿದೆ.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು (ಕೆಯುಡಬ್ಲ್ಯೂಜೆ) ಎಚ್.ಎಸ್.ದೊರೆಸ್ವಾಮಿ ಅವರ ಹೆಸರಿನಲ್ಲಿ ಕೊಡ ಮಾಡುವ ಪ್ರಶಸ್ತಿಗೆ ಆರ್.ಜಯಕುಮಾರ್ ಭಾಜನರಾಗಿದ್ದರು. ಅನಾರೋಗ್ಯದ ಕಾರಣದಿಂದ ಚಿತ್ರದುರ್ಗದಲ್ಲಿ ನಡೆದ ಪ್ರಶಸ್ತಿ ಪ್ರದಾನ ಕಾರ್ಯಕ್ರಮಕ್ಕೆ ಬರಲು ಸಾಧ್ಯವಾಗದ ಕಾರಣ, ಮೈಸೂರಿನ ಅವರ ತೋಟದ ಮನೆಗೆ ಹೋಗಿ ಅಲ್ಲಿ ಕೆಯುಡಬ್ಲೂಜೆ ಪ್ರಶಸ್ತಿ ಪ್ರದಾನ ಮಾಡಿತ್ತು ಎಂದು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ತಿಳಿಸಿದ್ದಾರೆ.

ಪತ್ನಿ ಡಾ.ಲೀಲಾ ಸಂಪಿಗೆ, ಪುತ್ರಿ ದೀಪಿಕಾ, ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News