ಶಿವಮೊಗ್ಗ| ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಬಸ್; ಪ್ರಯಾಣಿಕರಿಗೆ ವಿದ್ಯುತ್‌ ಆಘಾತ​​, ಇಬ್ಬರು ವಿದ್ಯಾರ್ಥಿನಿಯರು ಆಸ್ಪತ್ರೆಗೆ ದಾಖಲು

Update: 2023-08-02 10:47 GMT

ಸಾಗರ (ಶಿವಮೊಗ್ಗ) ಆ.2: ತಾಲೂಕಿನ ಸಿಗಂದೂರು ರಸ್ತೆಯಲ್ಲಿ ವಿದ್ಯುತ್ ಕಂಬಕ್ಕೆ ಖಾಸಗಿ ಬಸ್ ಢಿಕ್ಕಿ ಹೊಡೆದು ಇಬ್ಬರು ವಿದ್ಯಾರ್ಥಿನಿಯರಿಗೆ ಕರೆಂಟ್ ಶಾಕ್ ತಗುಲಿದ ಘಟನೆ ಬುಧವಾರ ವರದಿಯಾಗಿದೆ.

ಹೊಳೆಬಾಗಿಲಿನಿಂದ ಸಾಗರಕ್ಕೆ ಬರುತ್ತಿದ್ದ ಖಾಸಗಿ ಬಸ್ ಚಾಲಕ ಎದುರಿನಲ್ಲಿ ಬರುತ್ತಿದ್ದ ಬೈಕನ್ನು ತಪ್ಪಿಸಲು ರಸ್ತೆ ಪಕ್ಕಕ್ಕೆ ಬಸ್ ತೆಗೆದು ಕೊಂಡಾಗ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದೆ. ವಿದ್ಯುತ್ ತಂತಿ ಬಸ್ ಮೇಲೆ ಬಿದ್ದು ಬಸ್‍ನಲ್ಲಿ ವಿದ್ಯುತ್ ಪ್ರವಹಿಸಿದ್ದರಿಂದ ಇಬ್ಬರು ವಿದ್ಯಾರ್ಥಿನಿಯರು ಎಚ್ಚರ ತಪ್ಪಿದ್ದಾರೆ.

ತಕ್ಷಣ ವಿದ್ಯಾರ್ಥಿನಿಯರಿಗೆ ಸಾಗರ ಉಪವಿಭಾಗೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ಕಳಿಸಲಾಗಿದೆ. ಬಸ್ ಮೇಲೆ ವಿದ್ಯುತ್ ತಂತಿ ಹರಿದು ಬಿದ್ದ ತಕ್ಷಣ ಸ್ಥಳೀಯರು ಕಾರ್ಯಪ್ರವೃತ್ತರಾಗಿ ವಿದ್ಯುತ್ ಸಂಪರ್ಕ ಕಡಿತಗೊಳಿಸುವ ಜೊತೆಗೆ ರಕ್ಷಣಾ ಕಾರ್ಯ ಕೈಗೊಂಡಿದ್ದರಿಂದ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ಬಸ್‍ನಲ್ಲಿ 35ಕ್ಕೂ ಹೆಚ್ಚು ಪ್ರಯಾಣಿಕರಿದ್ದು ಯಾರಿಗೂ ಅಪಾಯ ಸಂಭವಿಸಿಲ್ಲ ಎನ್ನಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News