ಶಿವಮೊಗ್ಗ | ಸಾಲ ಕೇಳಲು ಬಂದಿದ್ದ ವ್ಯಕ್ತಿಯಿಂದ ಬ್ಯಾಂಕ್‌ ಮ್ಯಾನೇಜರ್‌ಗೆ ಜೀವ ಬೆದರಿಕೆ: ಆರೋಪ

Update: 2023-08-10 05:37 GMT

ಶಿವಮೊಗ್ಗ ಆ. 10: ತಾಲೂಕಿನ ಹೊಸಳ್ಳಿ ಶಾಖೆಯ ಯುನಿಯನ್ ಬ್ಯಾಂಕ್‌ನಲ್ಲಿ ಮ್ಯಾನೇಜರ್ ಒಬ್ಬರಿಗೆ ವ್ಯಕ್ತಿಯೋರ್ವ ಚಾಕು ತೋರಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಘಟನೆ ವರದಿಯಾಗಿದೆ. ಅಲ್ಲದೇ ಸಾಲ ನೀಡದಿದ್ದರೆ ಕೊಲೆ ಮಾಡುವುದಾಗಿ ಬೆದರಿಕೆ ಒಡ್ಡಿದ್ದಾನೆ ಎಂದು ಆರೋಪಿಸಲಾಗಿದೆ.

ಆ.7ರಂದು ಮಧ್ಯಾಹ್ನವ್ಯಕ್ತಿಯೊಬ್ಬಬ್ಯಾಂಕಿಗೆ ಬಂದಿದ್ದು, ಹಸು ಸಾಲಕ್ಕೆ ಆಗ್ರಹಿಸಿದ್ದಾರೆ. ಅಲ್ಲದೆ ಬ್ಯಾಂಕ್ ಮ್ಯಾನೇಜರ್ ನಿರಂಜನ್‌ಗೆ ಚಾಕು ತೋರಿಸಿ, ಜೀವ ಬೆದರಿಕೆ ಒಡ್ಡಿದ್ದಾನೆ ಎಂದು ತಿಳಿದುಬಂದಿದೆ.

ಚಾಕು ತೋರಿಸಿದ ವ್ಯಕ್ತಿಯನ್ನು ಅದೇ ಮೊದಲು ನೋಡಿದ್ದು ಆತ ಯಾವುದೇ ಸಾಲಕ್ಕೆ ಬ್ಯಾಂಕಿನಲ್ಲಿ ಅರ್ಜಿ ಸಲ್ಲಿಸಿಲ್ಲ ಎಂದು ಮ್ಯಾನೇಜರ್ ದೂರಿನಲ್ಲಿ ಆರೋಪಿಸಿದ್ದಾರೆ. ರೇವು ನಾಯ್ಕ ಎಂಬಾತನ ವಿರುದ್ಧತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News